", "articleSection": "Business,Government,Agriculture", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/283053_1751286291_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ : ಸರ್ಕಾರಿ ಕಛೇರಿಗಳಲ್ಲಿ ತಾಂಡವಾಡುತ್ತಿರುವ ಭ್ರಷ್ಟಚಾರಕ್ಕೆ ಕಡಿವಾಣ ಹಾಕಿ ಮಾವು ಟೊಮೋಟೊ ಬೆಳೆಗಾರರ ಸಮಸ್ಯೆ ಯನ್ನು ಗಂಭೀರವಾಗಿ ಪರಿಗಣ...Read more" } ", "keywords": "Kolar Corruption Issue: farmers' union petitions minister", "url": "https://dashboard.publicnext.com/node" }
ಕೋಲಾರ : ಸರ್ಕಾರಿ ಕಛೇರಿಗಳಲ್ಲಿ ತಾಂಡವಾಡುತ್ತಿರುವ ಭ್ರಷ್ಟಚಾರಕ್ಕೆ ಕಡಿವಾಣ ಹಾಕಿ ಮಾವು ಟೊಮೋಟೊ ಬೆಳೆಗಾರರ ಸಮಸ್ಯೆ ಯನ್ನು ಗಂಭೀರವಾಗಿ ಪರಿಗಣಿಸಿ ಟೊಮೋಟೊ ಮಾರುಕಟ್ಟೆ ಜಾಗದ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಬೇಕೆಂದು ರೈತ ಸಂಘದಿಂದ ಉಸ್ತುವಾರಿ ಸಚಿವರಿಗೆ ಮಾವು, ಟೋಮೋಟೊ ಸಮೇತ ಮನವಿ ನೀಡಿ ಒತ್ತಾಯಿಸಲಾಯಿತು.
ಕೋಲಾರ ಜಿಲ್ಲೆಯ ರೈತರು ಸರ್ಕಾರಕ್ಕೆ ಏನೂ ದ್ರೋಹ ಮಾಡಿದ್ದಾರೆ ಸಚಿವರೇ ? ಹಾಲು ತರಕಾರಿ ಚಿನ್ನ ರೇಷ್ಮೆ ಕೊಟ್ಟಂತಹ ಜನತೆಗೆ ನೀವು ಕೊಟ್ಟಿರುವುದು ಏನೂ ಬರೀ ನೋವು ಕಣ್ಣೀರು, ಹೋರಾಟ ಇದೇನಾ ನಮ್ಮ ಜಿಲ್ಲೆಗೆ ಸರ್ಕಾರ ನೀಡಿರುವ ಕೊಡುಗೆ ಎಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಸಚಿವರನ್ನು ಪ್ರಶ್ನೆ ಮಾಡಿದರು.
3 ತಿಂಗಳಿಂದ ಮಾವು, ಟೊಮೋಟೊ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದೆ ರಸ್ತೆಯಲ್ಲಿ ಸುರಿಯುವ ಜೊತೆಗೆ ತೋಟದಲ್ಲಿಯೇ ಕೊಳೆಯುತ್ತಿದ್ದು, ಬೆಳೆಗಾರರ ರಕ್ಷಣೆಗೆ ಸರ್ಕಾರ ನಿಲ್ಲಬೇಕೆಂದು ನಿರಂತರವಾಗಿ ರೈತರು ಬೀದಿಗೆ ಬಂದು ಹೋರಾಟ ಮಾಡುತ್ತಿದ್ದರೂ ಕನಿಷ್ಠ ನೊಂದ ರೈತರ ಸಮಸ್ಯೆಗಳನ್ನು ಆಲಿಸಲು ಮಾರುಕಟ್ಟೆಗಾಗಲಿ ರೈತರ ತೋಟಗಳಿಗಾಗಲಿ ಭೇಟಿ ನೀಡದೆ ಇರುವುದು ರೈತ ವಿರೋಧಿ ಧೋರಣೆ ಎಂದು ಸಚಿವರನ್ನು ತರಾಟೆಗೆ ತೆಗೆದುಕೊಂಡರು.
PublicNext
30/06/2025 05:54 pm