", "articleSection": "Law and Order,Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/400836_1751286564_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಬಿಸಿಯೂಟ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಜುಲೈ 9ರಂದು ರಾಷ್ಟ್ರಾದ್ಯಂತ ಮುಷ್ಕರ ಹಮ್ಮಿಕೊಂಡಿದ್ದು, ಅದರಂತೆ ಜಿಲ್ಲೆಯ...Read more" } ", "keywords": "Shivamogga Protest: Mid-Day Meal workers strike on July 9", "url": "https://dashboard.publicnext.com/node" } ಶಿವಮೊಗ್ಗ : ಜುಲೈ.09 ರಂದು ಬಿಸಿಯೂಟ ನೌಕರರ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಜುಲೈ.09 ರಂದು ಬಿಸಿಯೂಟ ನೌಕರರ ಪ್ರತಿಭಟನೆ

ಶಿವಮೊಗ್ಗ : ಬಿಸಿಯೂಟ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಜುಲೈ 9ರಂದು ರಾಷ್ಟ್ರಾದ್ಯಂತ ಮುಷ್ಕರ ಹಮ್ಮಿಕೊಂಡಿದ್ದು, ಅದರಂತೆ ಜಿಲ್ಲೆಯಲ್ಲೂ ಕೂಡ ಬಿಸಿಯೂಟ ಅಡುಗೆಯನ್ನು ಬಂದ್ ಮಾಡಿ, ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ರಾಜ್ಯ ಬಿಸಿಯೂಟ ನೌಕರರ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಹೇಳಿದರು.

ಸೋಮವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಬಿಸಿಯೂಟ ನೌಕರರು ಅತ್ಯಂತ ಸಂಕಷ್ಟದಲ್ಲಿದ್ದಾರೆ. ಮತ್ತು ಅವರ ಕೆಲಸದ ಕಾರ್ಯಗಳು ಹೆಚ್ಚಿದೆ. ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವಾಗಲೀ, ಕೇಂದ್ರ ಸರ್ಕಾರವಾಗಲಿ ವೇತನವನ್ನು ಹೆಚ್ಚಿಸಿಲ್ಲ. ಬಿಸಿಯೂಟ ಯೋಜನೆ ಪ್ರಾರಂಭವಾಗಿ 24 ವರ್ಷಗಳಾದರೂ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂದರು.

ಜುಲೈ 9ರಂದು ಬಿಸಿಯೂಟ ನೌಕರರು ತಮ್ಮ ಕೆಲಸಗಳನ್ನು ಬಂದ್‌ಮಾಡಿ, ಮುಷ್ಕರದಲ್ಲಿ ಪಾಲ್ಗೊಳ್ಳುತ್ತಾರೆ. ಪ್ರಮುಖವಾಗಿ ಎಂಡಿಎಂ ಯೋಜನೆ ಅನುದಾನ ಹೆಚ್ಚಿಸಬೇಕು. 26 ಸಾವಿರ ಕನಿಷ್ಟ ವೇತನ ನೀಡಬೇಕು. ಮಾಸಿಕ ಪಿಂಚಣಿ 10 ಸಾವಿರ ನೀಡಬೇಕು. ಕನಿಷ್ಠ ಕೂಲಿ ಜಾರಿಯಾಗಬೇಕು ಎಂದರು.

Edited By : PublicNext Desk
PublicNext

PublicNext

30/06/2025 05:59 pm

Cinque Terre

9.37 K

Cinque Terre

0

ಸಂಬಂಧಿತ ಸುದ್ದಿ