", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/405356-1751286597-prof.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarChikkaballapur" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಂತಾಮಣಿ : ಲಂಡನ್ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸ್ನೇಹಿತನಿಂದ ಲಕ್ಷ ಲಕ್ಷ ಹಣ ಪಡೆದು ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಎಸೆದಿದ್ದ ...Read more" } ", "keywords": "Chikkaballapur scam, London job fraud, assistant professor murder, job scam, financial fraud, fake job promise, scam victims, India news, Karnataka crime.", "url": "https://dashboard.publicnext.com/node" }
ಚಿಂತಾಮಣಿ : ಲಂಡನ್ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸ್ನೇಹಿತನಿಂದ ಲಕ್ಷ ಲಕ್ಷ ಹಣ ಪಡೆದು ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಜಿಲ್ಲೆಯ ಚಿಂತಾಮಣಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಲೆಯಾದ ವ್ಯಕ್ತಿ ಚಿಂತಾಮಣಿ ತಾಲೂಕಿನ ಜಿ. ರಾಮಾಪುರ ಗ್ರಾಮದ ಅಸಿಸ್ಟೆಂಟ್ ಪ್ರೊಫೆಸರ್ ರಾಮಾಂಜಿ. ಕೊಲೆ ಮಾಡಿದ ಆರೋಪಿಗಳನ್ನು ಚಿಂತಾಮಣಿ ತಾಲೂಕಿನ ದೊಡ್ಡಗುಟ್ಟಹಳ್ಳಿ ನಿವಾಸಿ ಸುಧಾಕರ್, ಈತನ ತಮ್ಮ ಮನೋಜ್ ಮತ್ತು ಗೆಳೆಯ ಮಂಜುನಾಥ್ ಎಂದು ಗುರ್ತಿಸಲಾಗಿದೆ. ಜೂನ್ 23 ರಂದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಸರಹದ್ದಿನ ಕೆಂಪದೇನಹಳ್ಳಿ ಗ್ರಾಮದ ವಾಸಿ ವೀರಣ್ಣ ಎಂಬುವರು ತಮ್ಮ ಜಮೀನಿನಲ್ಲಿರುವ ಬಾವಿಯಲ್ಲಿ ಶವ ಇರುವುದಾಗಿ ಚಿಂತಾಮಣಿ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು.
ಮೃತ ರಾಮಾಂಜಿ ಸಹೋದರನಿಂದ ಠಾಣೆಗೆ ದೂರು: ಜೂ.27 ರಂದು ಚಿಂತಾಮಣಿ ತಾಲೂಕು ರಾಂಪುರ ವಿಶ್ವನಾಥ ಎಂಬುವರು ತನ್ನ ತಮ್ಮ ರಾಮಾಂಜಿ ಬೆಂಗಳೂರಿನ ಯಲಹಂಕದ ನಿವೇದ ಇನ್ಸ್ಟಿಟ್ಯೂಟ್ ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದು, ಗ್ರಾಮಕ್ಕೆ ಬಂದಿದ್ದ ಆತ ಜೂ.18 ರಂದು ರಾತ್ರಿ ದೊಡ್ಡಗುಟ್ಟಹಳ್ಳಿ ಗ್ರಾಮದ ಸುಧಾಕರ್ ಎಂಬುವವರೊಂದಿಗೆ ಹೋಗಿದ್ದು, ನಂತರ ಆತನ ಸುಳಿವೇ ಸಿಕ್ಕಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರು ಕೆಂಪದೇನಹಳ್ಳಿ ಮೃತನ ಫೋಟೋ ಮತ್ತು ಬಟ್ಟೆಗಳನ್ನು ತೋರಿಸಿದಾಗ ಇದು ತನ್ನ ತಮ್ಮ ರಾಮಾಂಜಿಯದೇ ಎಂದು ಗುರ್ತಿಸಿದ್ದರು.
ಬಳಿಕ ಪೊಲೀಸರು ಸಿಸಿ ಕ್ಯಾಮೆರಾಗಳ ಫೂಟೇಜ್ಗಳನ್ನು ಸಂಗ್ರಹಿಸಿ, ಕೊಲೆ ಆರೋಪಿಯನ್ನು ಗುರ್ತಿಸಿ, ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕೊಲೆಯಾದ ರಾಮಾಂಜಿಗೆ ಲಂಡನ್ ನಲ್ಲಿ ಕೆಲಸವನ್ನು ಕೊಡಿಸುವುದಾಗಿ ಪಡೆದು ಕೊಂಡಿದ್ದ ಹಣವನ್ನು ವಾಪಾಸ್ ಕೇಳಿದ್ದೇ ಕೊಲೆಗೆ ಕಾರಣ ಎಂಬುದು ಬೆಳಕಿಗೆ ಬಂದಿದೆ.
ಚಿಕ್ಕತೇಕಹಳ್ಳಿ ಡಿ ಶಿವಕುಮಾರ್,ಪಬ್ಲಿಕ್ ನೆಕ್ಸ್ಟ್, ಚಿಕ್ಕಬಳ್ಳಾಪುರ
PublicNext
30/06/2025 06:00 pm