", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/286525-1751286627-WhatsApp-Image-2025-06-30-at-6.00.17-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ: ಬ್ರಹ್ಮಾವರ ತಾಲೂಕು ಕುಂಜಾಲುವಿನಲ್ಲಿ ಹಸುವಿನ ರುಂಡ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಸ್ಲಿಂ ಮುಖಂಡರು ಎಸ್ ಪಿಯವರನ್ನು ಭೇಟಿಯ...Read more" } ", "keywords": "Udupi, cow carcass dumping case, SP meets Muslim leaders, communal harmony, law and order, police investigation.", "url": "https://dashboard.publicnext.com/node" } ಉಡುಪಿ: ದನದ ರುಂಡ ಎಸೆದ ಪ್ರಕರಣ- ಎಸ್ಪಿ ಭೇಟಿಯಾದ ಮುಸ್ಲಿಂ ಮುಖಂಡರು, ಸೌಹಾರ್ದತೆ ಕಾಪಾಡಲು ಮನವಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ದನದ ರುಂಡ ಎಸೆದ ಪ್ರಕರಣ- ಎಸ್ಪಿ ಭೇಟಿಯಾದ ಮುಸ್ಲಿಂ ಮುಖಂಡರು, ಸೌಹಾರ್ದತೆ ಕಾಪಾಡಲು ಮನವಿ

ಉಡುಪಿ: ಬ್ರಹ್ಮಾವರ ತಾಲೂಕು ಕುಂಜಾಲುವಿನಲ್ಲಿ ಹಸುವಿನ ರುಂಡ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಸ್ಲಿಂ ಮುಖಂಡರು ಎಸ್ ಪಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ, ಕೋಮು ಸೌಹಾರ್ದತೆ ಕಾಪಾಡುವಂತೆ ಆಗ್ರಹಿಸಿದರು.

ಬಳಿಕ ಮಾತನಾಡಿದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸರ್ಫುದ್ದೀನ್, ಜಿಲ್ಲಾ ಮುಸ್ಲಿಂ ಒಕ್ಕೂಟ ಮತ್ತು ಅಲ್ಪಸಂಖ್ಯಾತ ಘಟಕದಿಂದ ಎಸ್ಪಿಯವರಿಗೆ ಮನವಿ ನೀಡಿದ್ದೇವೆ. ಕುಂಜಾಲು ಜಮಾತಿನವರು ಕೂಡ ಇಲ್ಲಿ ಇದ್ದೇವೆ. ದನದ ತ್ಯಾಜ್ಯ ರಸ್ತೆಗೆ ಎಸೆದವರು ಯಾರು ಎನ್ನುವುದು ಗೊತ್ತಿಲ್ಲ. ಯಾರೇ ಈ ಕೃತ್ಯ ಮಾಡಿದ್ದರೂ ಸೂಕ್ತ ಕ್ರಮ ಕೈಗೊಳ್ಳಲು ಎಸ್ಪಿಯವರಿಗೆ ಮನವಿ ಮಾಡಿದ್ದೇವೆ.

ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡುವಂತೆ ಮನವಿ ಮಾಡಿದ್ದೇವೆ. ನಮ್ಮ ಊರು ಸೌಹಾರ್ದದಿಂದ ಕೂಡಿದೆ. ಸೌಹಾರ್ದ ಕೆಡಿಸುವ ಕೆಲಸ ಯಾರೇ ಮಾಡಿದರೂ ಅದು ತಪ್ಪು. ಪೊಲೀಸ್ ಇಲಾಖೆ ಮೇಲೆ ನಮಗೆ ಭರವಸೆ ಇದೆ ಎಂದು ಹೇಳಿದ್ದಾರೆ.

Edited By : Shivu K
PublicNext

PublicNext

30/06/2025 06:00 pm

Cinque Terre

14.34 K

Cinque Terre

0

ಸಂಬಂಧಿತ ಸುದ್ದಿ