", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/405356-1751287733-korate.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಸ್ಕಿ: ಶಿಕ್ಷಕರಿಲ್ಲದೆ ಪಾಠ-ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ತಾಲೂಕಿನ ವೆಂಕಟಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ...Read more" } ", "keywords": "teacher shortage, student protest, Venkatarapura school, Maski, education crisis, lack of teachers, school issues, Karnataka news, education system, student agitation.", "url": "https://dashboard.publicnext.com/node" } ಮಸ್ಕಿ : ಶಿಕ್ಷಕರ ಕೊರತೆಯಿಂದ ವೆಂಕಟಪುರ ಶಾಲೆಯ ಮಕ್ಕಳು ಪರದಾಟ - ವಿದ್ಯಾರ್ಥಿಗಳ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಸ್ಕಿ : ಶಿಕ್ಷಕರ ಕೊರತೆಯಿಂದ ವೆಂಕಟಪುರ ಶಾಲೆಯ ಮಕ್ಕಳು ಪರದಾಟ - ವಿದ್ಯಾರ್ಥಿಗಳ ಪ್ರತಿಭಟನೆ

ಮಸ್ಕಿ: ಶಿಕ್ಷಕರಿಲ್ಲದೆ ಪಾಠ-ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ತಾಲೂಕಿನ ವೆಂಕಟಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿ ಪರದಾಡುವಂತಹ ಪರಸ್ಥಿತಿ ನಿರ್ಮಾಣವಾಗಿದ್ದು ಶಾಲೆ ಮಕ್ಕಳು ಹಾಗೂ ಪೋಷಕರು ಸೋಮವಾರದಂದು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಸರಿ ಸುಮಾರು 65 ಕ್ಕೂ ಅಧಿಕ ಮಕ್ಕಳು ವ್ಯಾಸಂಗ ಮಾಡುತ್ತಿರುವ ಈ ಶಾಲೆಗೆ ಬಡವರು, ದಲಿತರು, ಕೊಳಚೆ ಪ್ರದೇಶದ ನಿವಾಸಿಗಳ ಮಕ್ಕಳೇ ಹೆಚ್ಚಾಗಿ ದಾಖಲಾಗಿದ್ದಾರೆ. ಆದರೆ ಈ ಶಾಲೆಯಲ್ಲಿ ಇಬ್ಬರು ಕಾಯಂ ಶಿಕ್ಷಕರಿದ್ದು ಅವರಲ್ಲಿ ಒಬ್ಬರು ಮಹಿಳಾ ಶಿಕ್ಷಕಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದು ಇನ್ನೊಬ್ಬ ಶಾಲೆಯ ಕಾಯಂ ಮುಖ್ಯ ಶಿಕ್ಷಕರಾದ ಶರಣೆಗೌಡ ಎಂಬುವವರನ್ನು ಉಸ್ಕಿಹಾಳ ಎಂಬ ಗ್ರಾಮದ ಶಾಲೆಗೆ ಪ್ರಭಾರಿಯಾಗಿ ನೇಮಿಸಲಾಗಿದ್ದು ಕಳೆದ ಮೂರು ವರ್ಷಗಳಿಂದ ಕಾರ್ಯನಿರ್ವಹಿಸಲು ತೆರಳುತ್ತಿದ್ದಾರೆ ಹಾಗೂ ಮುಖ್ಯಶಿಕ್ಷಕರಿಗೆ ಕಚೇರಿ ಕೆಲಸ, ಮೀಟಿಂಗ್, ಬಿಸಿಯೂಟ ಮುಂತಾದ ಕೆಲಸಗಳ ಹೊರೆ ಇದೆ. ಇದರಿಂದಾಗಿ ಶಾಲೆಯ ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗದೇ ವಂಚಿತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿದ್ಯಾರ್ಥಿಗಳು ಶಿಕ್ಷಣದಿಂದ ಹಿಂದುಳಿಯಲು ಶಿಕ್ಷಣ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ನಿರ್ಲಕ್ಷವೇ ಕಾರಣ.ಇದರಿಂದ ಶಾಲೆ ಮಕ್ಕಳಿಗೆ ಉತ್ತಮ ಶಿಕ್ಷಣ ಮರೀಚಿಕೆಯಾಗಿದ್ದು, ಸರಕಾರ ಒಂದೆಡೆ ಶಿಕ್ಷಣ ಮಕ್ಕಳ ಹಕ್ಕು ಎಂದು ಹೇಳುತ್ತಾ ಇನ್ನೊಂದೆಡೆ ಶಿಕ್ಷಕರಿಲ್ಲದೆ ಮಕ್ಕಳನ್ನು ನಲುಗಿಸುತ್ತಿದೆ. ಪಾಠ- ಪ್ರವಚನಗಳು ಇಲ್ಲದೆ ಮಕ್ಕಳು ಪರದಾಡುವಂತೆ ಆಗಿದೆ, ಇದು ಮಕ್ಕಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಎರಡು ವರ್ಷಗಳಿಂದಲೂ ಈ ಸಮಸ್ಯೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರು ರೋಸಿ ಹೋಗಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗೋವಿಂದಪ್ಪ ಹಾಗೂ ಗ್ರಾಮದ ನಿವಾಸಿಗಳ ನೇತೃತ್ವದಲ್ಲಿ ಸೋಮವಾರದಂದು ಶಾಲೆ ಮುಂದೆ ಪ್ರತಿಭಟನೆ ನಡೆಸಿದರು.

ಇನ್ನು ಶಾಲೆಯಲ್ಲಿ ಮಕ್ಕಳಿಗೆ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲದೆ ನೀರಿನ ವ್ಯವಸ್ಥೆ ಇಲ್ಲದೆ ಶೌಚಾಲಯಗಳು ಗಬ್ಬೆದ್ದು ನಾರುತ್ತಿದ್ದು ಶಾಲೆಯ ಪುಟ್ಟ ಪುಟ್ಟ ಹೆಣ್ಣು ಮಕ್ಕಳು ಮೂತ್ರ ವಿಸರ್ಜನೆಗೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

Edited By : Vinayak Patil
Kshetra Samachara

Kshetra Samachara

30/06/2025 06:19 pm

Cinque Terre

680

Cinque Terre

0

ಸಂಬಂಧಿತ ಸುದ್ದಿ