", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/39640520250630062406filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ನಗರದಲ್ಲಿ ದಸರಾ ಆಚರಣೆಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣ್ಣದ ತಾಲೂ...Read more" } ", "keywords": "Chamarajanagar Dasara Festival: appeal to MP for celebration", "url": "https://dashboard.publicnext.com/node" } ಚಾಮರಾಜನಗರ : ದಸರಾ ಆಚರಿಸಲು ಒತ್ತಾಯಿಸಿ ಸಂಸದರಿಗೆ ಮನವಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ದಸರಾ ಆಚರಿಸಲು ಒತ್ತಾಯಿಸಿ ಸಂಸದರಿಗೆ ಮನವಿ

ಚಾಮರಾಜನಗರ : ನಗರದಲ್ಲಿ ದಸರಾ ಆಚರಣೆಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣ್ಣದ ತಾಲೂಕು ಘಟಕದ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಸಂಸದ ಸುನೀಲ್ ಬೋಸ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ಸತತ 7 ವರ್ಷದಿಂದ ಸರ್ಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ದಸರಾ ಕಾರ್ಯಕ್ರಮವನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಮರಾಜನಗರ ದಸರಾ ನಡೆಸಲಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಚಾಮರಾಜನಗರದಲ್ಲಿ ಮೈಸೂರಿನ ಅರಸರಾದ ಶ್ರೀ ಚಾಮರಾಜೇಂದ್ರ ಒಡೆಯರ್ ಅವರು ಹುಟ್ಟಿದ ಸ್ಥಳವಾಗಿ ಜನನ ಮಂಟಪವೂ ಕೂಡ ಇದೆ. ಈ ಜಿಲ್ಲೆಯು ಗಡಿ ಜಿಲ್ಲೆಯಾಗಿದ್ದು, ಹಿಂದುಳಿದ ಜಿಲ್ಲೆಯು ಆಗಿದೆ.

ಈ ಜಿಲ್ಲೆಯಲ್ಲಿ ದಸರಾ ಆಚರಣೆ ಮಾಡುವುದರಿಂದ ಇಲ್ಲಿನ ಸ್ಥಳಿಯ ಎಲ್ಲ ವ್ಯಾಪಾರಸ್ಥರಿಗೂ ಹಾಗೂ ಸ್ಥಳೀಯ ಕಲಾವಿದರಿಗೆ ಅನುಕೂಲವಾಗಲಿದೆ. ರೈತರಿಗೆ ಹಾಗೂ ಮಹಿಳಾ ಸಂಘದವರಿಗೆ ಅವರು ಉತ್ಪನ್ನ ಮಾಡಿದ ವಸ್ತುಗಳಿಗೆ ಒಂದು ವೇದಿಕೆ ಸಿಗಲಿದೆ. ಜಿಲ್ಲೆಯಲ್ಲಿ ಇರುವ ಅನೇಕ ಕಲಾವಿದರಿಗೆ ಪ್ರೋತ್ಸಾಹ ಸಿಗಲಿದೆ. ಹೀಗಾಗಿ ಪ್ರತಿವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ದಸರಾ ಅಚರಣೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಕ್ವಾಲಿಟಿ ನವೀನ್, ಉಪಾಧ್ಯಕ್ಷ ಅವಿನಾಶ್, ಟೌನ್ ಅಧ್ಯಕ್ಷ ಮಹೇಂದ್ರ, ಕಾರ್ಮಿಕ ಘಟಕದ ಅಧ್ಯಕ್ಷ ಹರೀಶ್ ನಾಯಕ, ಮಹೇಶ್ ಇದ್ದರು.

Edited By : PublicNext Desk
PublicNext

PublicNext

30/06/2025 06:24 pm

Cinque Terre

5.1 K

Cinque Terre

0

ಸಂಬಂಧಿತ ಸುದ್ದಿ