ಚಿಕ್ಕಮಗಳೂರು : ರಾಜ್ಯ ಸರ್ಕಾರದ ಭ್ರಷ್ಟಚಾರವನ್ನು ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ವಿಧಾನ ಪರಿಷತ್ ಸದಸ್ಯ ಭೋಜೆಗೌಡ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಿದ್ರು.
ನಗರದ ಜೆಡಿಎಸ್ ಕಚೇರಿ ಬಳಿ ಪಂಜುಗಳನ್ನು ಹಿಡಿದು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಹನುಮಂತಪ್ಪ ಸರ್ಕಲ್ ವರೆಗೆ ಪಂಜಿನ ಮೆರವಣಿಗೆರೆಯಲ್ಲಿ ಸಾಗಿದ್ರು.
PublicNext
30/06/2025 07:22 pm