ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ : ಬರಹಗಳನ್ನು ಹೊಸ ತಲೆಮಾರಿಗೆ ರವಾನಿಸಬೇಕು - ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ : ಕನ್ನಡ ನಾಡು ನುಡಿಗಾಗಿ ಹೋರಾಟ ನಡೆಸಿ ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಿಗೊಳಿಸಿದ ಬರಹಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ಹೊಸ ತಲೆಮಾರಿಗೆ ರವಾನಿಸುವ ಕೆಲಸ ನಡೆಯಬೇಕು.

ಬೆಳಗಾವಿಯ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದಿಂದ ಕೊಡಮಾಡಲಾದ ರಾಜ್ಯಮಟ್ಟದ ಕಟ್ಟೀಮನಿ ಕಾದಂಬರಿ ಪ್ರಶಸ್ತಿಯನ್ನು ಕನ್ನಡ ಹಿರಿಯ ಸಾಹಿತಿ, ಚಿಂತಕ ಪ್ರೊ. ಬರಗೂರು ರಾಮಚಂದ್ರಪ್ಪ ಅವರಿಗೆ ಇಂದು ಬೆಳಗಾವಿಯ ಸರ್ಕಾರಿ ಸಂಗೊಳ್ಳಿ ರಾಯಣ್ಣ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಅವರು, ಕಾಲಕಾಲಕ್ಕೆ ಪ್ರಜ್ಞಾಶೀಲ ಬರಹಗಾರರು ಸಮಾಜಕ್ಕೆ ರಾಜಕೀಯ ವಲಯಕ್ಕೆ ಮಾರ್ಗದರ್ಶನ ನೀಡಿ ಸರಿದಾರಿಗೆ ಕರೆತರುವ ಪ್ರಯತ್ನ ಮಾಡುತ್ತ ಬಂದಿದ್ದಾರೆ. ಈ ಪರಂಪರೆ ಮುಂದುವರೆಯಬೇಕು ಎಂದು ಹೇಳಿದರು.

ಈ ವೇಳೆ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಅಧ್ಯಕ್ಷ ಡಾಕ್ಟರ್ ಯಲ್ಲಪ್ಪ ಹಿಮ್ಮಡಿ, ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಸಿ. ಎಂ. ತ್ಯಾಗರಾಜ, ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾಕ್ಟರ್ ಕಿರಣ ಗಾಜನೂರ, ಬಸವರಾಜ ಕಟ್ಟೀಮನಿ ಅವರ ಮಗಳು ಮಂಜುಳಾ ಬಿರಾದಾರ ಸೇರಿದಂತೆ ಕಟ್ಟೀಮನಿ ಪ್ರತಿಷ್ಠಾನದ ಪದಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

Edited By : Vinayak Patil
PublicNext

PublicNext

30/06/2025 09:35 pm

Cinque Terre

6.47 K

Cinque Terre

0

ಸಂಬಂಧಿತ ಸುದ್ದಿ