ಮೈಸೂರ : DCM ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಹೊಸೂರು ಬಳಿ ಎಕ್ಸ್ಪ್ರೆಸ್ವೇ ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಹಿಂದೆಯೇ ಇದ್ದ ಡಿಕೆಶಿ ಕಾರಿಗೆ ಯಾವುದೇ ಅಪಾಯ ಆಗಿಲ್ಲ.
ಘಟನೆಯಲ್ಲಿ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಬಳಿಕ ಡಿಕೆಶಿ ಬೆಂಗಳೂರಿಗೆ ಸೇಫಾಗಿ ಪ್ರಯಾಣ ಬೆಳೆಸಿದ್ದಾರೆ. ಮೈಸೂರಿನ ಸಾಧನಾ ಸಮಾವೇಶಕ್ಕೆ ತೆರಳಿ ಡಿಕೆಶಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ನಡೆದಿದೆ.
PublicNext
19/07/2025 06:19 pm