", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/235762-1753443633-Untitled-design-(8).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ದೆಹಲಿ : ಕರ್ನಾಟಕ ಲೋಕಸಭೆಯಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಿಟಿ ರವಿ ತಿರುಗೇಟು ನೀಡಿದ್ದಾರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ...Read more" } ", "keywords": "Congress Lok Sabha seats, Karnataka election results, Congress party performance, 2024 Lok Sabha elections, Congress win 9 seats, BJP Karnataka, JD(S) alliance, Siddaramaiah, DK Shivakumar, Congress guarantees, Karnataka politics", "url": "https://dashboard.publicnext.com/node" } 2024ರಲ್ಲಿ ಕಾಂಗ್ರೆಸ್ ಲೋಕಸಭೆಯ ಒಂದು ಸೀಟೂ ಗೆಲ್ಲಲು ಕಷ್ಟ ಇತ್ತು. ಈಗ 9 ಸೀಟ್ ಹೇಗೆ ಗೆದ್ದರು? - ಸಿಟಿ ರವಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2024ರಲ್ಲಿ ಕಾಂಗ್ರೆಸ್ ಲೋಕಸಭೆಯ ಒಂದು ಸೀಟೂ ಗೆಲ್ಲಲು ಕಷ್ಟ ಇತ್ತು. ಈಗ 9 ಸೀಟ್ ಹೇಗೆ ಗೆದ್ದರು? - ಸಿಟಿ ರವಿ

ದೆಹಲಿ : ಕರ್ನಾಟಕ ಲೋಕಸಭೆಯಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಿಟಿ ರವಿ ತಿರುಗೇಟು ನೀಡಿದ್ದಾರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 9 ಲೋಕಸಭಾ ಸೀಟ್ ಗೆಲ್ಲುವಲ್ಲಿ ಯಾವುದೋ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಷಡ್ಯಂತ್ರ ಮೀರಿ ಎನ್‍ಡಿಎ 19 ಸೀಟ್ ಗೆದ್ದಿದ್ದು ಅದು ಪ್ರಜಾಪ್ರಭುತ್ವದ ಗೆಲುವು. ಇಲ್ಲದೇ ಇದ್ದರೆ, ಕಲಬುರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಅಳಿಯ ಗೆಲ್ಲಲು ಹೇಗೆ ಸಾಧ್ಯವಾಗುತ್ತಿತ್ತು ? ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕೋಡಿ, ದಾವಣಗೆರೆ, ಚಾಮರಾಜನಗರ, ಹಾಸನದಲ್ಲಿ ಕಾಂಗ್ರೆಸ್ ಗೆಲ್ಲಬೇಕಾದರೆ ಚುನಾವಣಾ ಅಕ್ರಮ ನಡೆಸಿಯೇ ಗೆದ್ದಿದ್ದಾರೆ ಅನಿಸುತ್ತದೆ. ಕಾಂಗ್ರೆಸ್ಸಿನವರೇ ಚುನಾವಣಾ ಅಕ್ರಮ ನಡೆಸಿದ್ದಾರೆಂಬ ಅನುಮಾನ ತಮ್ಮದು ಎಂದು ನುಡಿದರು. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ಆಗಬೇಕೆಂದು ಒತ್ತಾಯಿಸಿದರು.

ಮುಖ್ಯಮಂತ್ರಿ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು ಚುನಾವಣಾ ಮತದಾರರ ಪಟ್ಟಿಯಲ್ಲಿ ಕರ್ನಾಟಕದಲ್ಲೂ ಅಕ್ರಮ ಆಗಿದೆ ಎಂದು ಹೇಳಿದ್ದಾರೆ. ನನಗೂ ಅನುಮಾನ ಬಂದಿತ್ತು. ಕಾಂಗ್ರೆಸ್- ಜೆಡಿಎಸ್ ಒಟ್ಟಾಗಿ ಇದ್ದಾಗಲೇ 2019ರಲ್ಲಿ ಒಂದೊಂದು ಸೀಟ್ ಗೆದ್ದಿದ್ದವು. 2024ರಲ್ಲಿ ಕಾಂಗ್ರೆಸ್ಸಿನವರು ಹೇಗೆ 9 ಲೋಕಸಭಾ ಸೀಟ್ ಗೆದ್ದರು ಎಂದು ಪ್ರಶ್ನಿಸಿದರು.

ಚುನಾವಣಾ ಆಯೋಗಕ್ಕೆ ಅವರದೇ ಆದ ಅಧಿಕೃತ ಅಧಿಕಾರಿಗಳ ಜಾಲ ಇರುವುದಿಲ್ಲ. ಕಂದಾಯ ಇಲಾಖೆ ಅಧಿಕಾರಿಗಳು, ಶಾಲಾ ಶಿಕ್ಷಕರನ್ನು ಬಳಸಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾರೆ. ಬಹುತೇಕ ಜನರು ಸರಕಾರದ ಮರ್ಜಿಗೆ ಒಳಪಟ್ಟಿರುತ್ತಾರೆ ಎಂದು ಭಾವಿಸುವುದಾದರೆ, ರಾಜ್ಯದಲ್ಲಿ ಆಗ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಅಕ್ರಮ ನಡೆಸುವ ಹೆಚ್ಚು ಅವಕಾಶ ಯಾರಿಗೆ ಇರುತ್ತದೆ ಎಂದು ಪ್ರಶ್ನಿಸಿದರು.

2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಇಂಥದ್ದೇನೋ ನಡೆಸಿರುವ ಸಾಧ್ಯತೆ ಇದೆ. ಸಿದ್ದರಾಮಯ್ಯನವರ ಗೆಲುವಿನ ಸಾಧ್ಯತೆ ಬಗ್ಗೆ ಜನರು ಅನುಮಾನ ಪಡುತ್ತಿದ್ದರು. ಮೆಡಿಕಲ್ ಕಾಲೇಜು ಕೊಟ್ಟಿದ್ದು, 5 ಸಾವಿರ ಕೋಟಿ ರೂ.ಗಳ ಕೆಲಸ ಮಾಡಿದ ಸಿ.ಟಿ.ರವಿ ಸೋಲಿಸಲು ಕಷ್ಟ ಎನ್ನುತ್ತಿದ್ದರು. ನನ್ನ ಸೋಲಿನಲ್ಲೂ ಇಂಥ ಅಕ್ರಮ ನಡೆಸಿರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಿದರು. 2024ರಲ್ಲಿ ಕಾಂಗ್ರೆಸ್ ಲೋಕಸಭೆಯ ಒಂದು ಸೀಟೂ ಗೆಲ್ಲಲು ಕಷ್ಟ ಇತ್ತು. 9 ಸೀಟ್ ಹೇಗೆ ಗೆದ್ದರು? ಇದೆಲ್ಲ ನೋಡಿದಾಗ ಕಾಂಗ್ರೆಸ್ ಪಕ್ಷದ ನಿರ್ದೇಶನದ ಮೇರೆಗೆ ಚುನಾವಣಾ ಅಕ್ರಮವನ್ನು ನಡೆಸಿರುವ ಸಾಧ್ಯತೆ ಇದೆ ಎಂದು ಆರೋಪಿಸಿದರು.

Edited By : Nagaraj Tulugeri
PublicNext

PublicNext

25/07/2025 05:13 pm

Cinque Terre

84.31 K

Cinque Terre

4

ಸಂಬಂಧಿತ ಸುದ್ದಿ