", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/387839-1753879203-Untitled-design---2025-07-30T181356.537.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣರ ಜೊತೆಗೂಡಿ ಭೇಟಿ ಮಾಡಿದ...Read more" } ", "keywords": "Hubballi railway station upgrade, international standards, Pralhad Joshi, continuous efforts, world-class facilities, Indian Railways, infrastructure development, passenger amenities, modernization, railway transformation ", "url": "https://dashboard.publicnext.com/node" }
ನವದೆಹಲಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣರ ಜೊತೆಗೂಡಿ ಭೇಟಿ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಕುರಿತಾಗಿ ಮನವಿ ಸಲ್ಲಿಸಿದರು.
ಇದಲ್ಲದೇ ಗದಗ ರಸ್ತೆಯ ಮೇಲಿರುವ ಎರಡು ಲೇನ್ ರೈಲ್ವೆ ಬ್ರಿಡ್ಜ್ನ್ನು ನಾಲ್ಕು ನಾಲ್ಕು ಲೇನ್ಗೆ ವಿಸ್ತರಣೆಗೊಳಿಸಲು ಹೊಸ ಸೇತುವೆ ನಿರ್ಮಿಸುವ ಪ್ರಸ್ತಾಪವನ್ನೂ ಮಂಡಿಸಿದರು.
ಬೆಂಗಳೂರು ರೈಲ್ವೆ ನಿಲ್ದಾಣ ಹೊರತುಪಡಿಸಿದರೆ, ಹುಬ್ಬಳ್ಳಿ ನಿಲ್ದಾಣವು ಅತ್ಯಂತ ಜನನಿಬಿಡ ಸ್ಥಳವಾಗಿ ಹೊರಹೊಮ್ಮಿದ್ದು, ದಿನಕ್ಕೆ ಸರಾಸರಿ 50 ಸಾವಿರಕ್ಕೂ ಹೆಚ್ಚು ಪ್ರಯಾಣಿಕರ ಸಂಚಾರವಿದೆ. ನೈರುತ್ಯ ರೈಲ್ವೆ ವಲಯದ ಮುಖ್ಯ ಕಚೇರಿಯೂ ಇಲ್ಲಿ ಇರುವುದರಿಂದ, ಈ ನಿಲ್ದಾಣವು ಭಾರತೀಯ ರೈಲ್ವೆಯಲ್ಲಿ ಮಹತ್ವಪೂರ್ಣ ಸ್ಥಾನವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ, ನಿಲ್ದಾಣವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಅಗತ್ಯವಿದೆ ಎಂದು ಅವರು ಒತ್ತಾಯಿಸಿದರು.
ಪ್ರತಿದಿನ ಉದ್ಯೋಗ, ಶಿಕ್ಷಣ ಹಾಗೂ ಇತರ ಕಾರ್ಯಗಳಿಗಾಗಿ ಸಾವಿರಾರು ಮಂದಿ ಹುಬ್ಬಳ್ಳಿಗೆ ಓಡಾಡುತ್ತಿದ್ದಾರೆ. ಸ್ಥಳೀಯ ಪಟ್ಟಣಗಳು ಹಾಗೂ ಗ್ರಾಮಗಳಿಂದ ಪ್ರಯಾಣಿಸುವವರಿಗೆ ಅನುಕೂಲವಾಗುವಂತೆ, ಹತ್ತು ಹೊಸ MEMU ರೈಲುಗಳನ್ನು ಆರಂಭಿಸುವಂತೆ ಜೋಶಿಯವರು ಮನವಿ ಮಾಡಿದರು. ಕೋವಿಡ್ ಸಮಯದಲ್ಲಿ ಸ್ಥಗಿತಗೊಂಡ ಹಲವು ಪ್ಯಾಸೆಂಜರ್ ರೈಲುಗಳನ್ನು ಪುನರಾರಂಭಿಸುವಂತೆ ಸಹ ಅವರು ಒತ್ತಾಯಿಸಿದರು.
ಅದಕ್ಕೂಮೇಲೆ, ಹುಬ್ಬಳ್ಳಿಯಲ್ಲಿ ಆಧಾರ್ ಸೇವಾ ಕೇಂದ್ರವನ್ನು ಸ್ಥಾಪಿಸುವ ಹಾಗೂ ನಿರ್ವಹಿಸಲು ಸೇವಾ ಪೂರೈಕೆದಾರರನ್ನು ತೊಡಗಿಸಿಕೊಳ್ಳುವ ಸಂಬಂಧಿತ RFP (Request For Proposal) ಪ್ರಕ್ರಿಯೆಯನ್ನು ಮುಂದುವರಿಸಲು ಅವರು ಕೇಳಿಕೊಂಡರು.
ಸುಮಾರು 10 ಲಕ್ಷ ಜನಸಂಖ್ಯೆ ಹೊಂದಿರುವ ಹುಬ್ಬಳ್ಳಿ ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವುದರಿಂದ, ಇಲ್ಲಿ ಆಧಾರ್ ಸೇವಾ ಕೇಂದ್ರ ಅವಶ್ಯಕವಾಗಿದೆ ಎಂಬುದು ಅವರ ಅಭಿಪ್ರಾಯ.
ಜೋಶಿಯವರ ಈ ಮನವಿಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಸಚಿವ ಅಶ್ವಿನಿ ವೈಷ್ಣವ ಅವರು, ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಮಟ್ಟದ ಕೇಂದ್ರಗಳ ಜೊತೆಗೆ ಹುಬ್ಬಳ್ಳಿ ಹಾಗೂ ಇತರೆ ಪ್ರಮುಖ ನಗರಗಳಲ್ಲಿ ಈ ಸೇವಾ ಕೇಂದ್ರಗಳನ್ನು ಸ್ಥಾಪಿಸುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಅಂತಿಮವಾಗಿ, ಉತ್ತರ ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಉತ್ತರ ಕರ್ನಾಟಕದ ಜನರ ಪರವಾಗಿ ಕೇಂದ್ರ ಸಚಿವ ಜೋಶಿ ಧನ್ಯವಾದ ವ್ಯಕ್ತಪಡಿಸಿದರು.
PublicNext
30/07/2025 06:10 pm