ಸಕಲೇಶಪುರ: ಧರ್ಮಸ್ಥಳದಲ್ಲಿ ಇಂದು ನಡೆಯಲಿರುವ ಬೃಹತ್ ಸಮಾವೇಶದ ಅಂಗವಾಗಿ ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಧರ್ಮಸ್ಥಳದತ್ತ ಹೊರಟಿದ್ದಾರೆ.
ಈ ಧರ್ಮಯಾತ್ರೆಗೆ ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಾಸನ ಜಿಲ್ಲಾಧ್ಯಕ್ಷರಾದ ಸಿದ್ದೇಶ್ ನಾಗೇಂದ್ರ, ಪಕ್ಷದ ಮುಖಂಡರು ಹಾಗೂ ಅನೇಕ ಕಾರ್ಯಕರ್ತರು ಹಾಜರಿದ್ದರು. ಭಕ್ತಿ, ಶ್ರದ್ಧೆ ಮತ್ತು ಧಾರ್ಮಿಕ ಶಾಂತಿಯ ಹಾದಿಯಲ್ಲಿ ನಡೆಯುತ್ತಿರುವ ಈ ಯಾತ್ರೆಯು ಕ್ಷೇತ್ರದಾದ್ಯಂತ ಭಾರೀ ಉತ್ಸಾಹವನ್ನು ಹುಟ್ಟಿಸಿದೆ.
Kshetra Samachara
01/09/2025 01:49 pm