ಕೋಲಾರ: ಮುಳಬಾಗಿಲು ತಾಲೂಕಿನ ಐತಿಹಾಸಿಕ ದೇವಾಲಯಗಳು ರಸ್ತೆ ಸಂಪರ್ಕ ಆಸ್ಪತ್ರೆಗಳು ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂಆರ್ ರವಿ ಅವ್ರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ಸಭೆಯಲ್ಲಿ ಮಾತನಾಡಿ ತಾಲೂಕಿನ 8 ಐತಿಹಾಸಿಕ ದೇವಾಲಯಗಳ ಅಭಿವೃದ್ಧಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಕೊಲದೇವಿ ಗರುಡ ದೇವಸ್ಥಾನ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ಸಮರ್ಪಕ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಜಿಲ್ಲಾಧಿಕಾರಿ ಸೂಚಿಸದರು. ಸಾರ್ವಜನಿಕಲ್ಲಿ ಕಸ ವಿಲೇವಾರಿ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವುದು ನಗರಸಭೆ ಅಧಿಕಾರಿಗಳು ಮಾಡ ಬೇಕು ಎಂದು ತಿಳಿಸಿದರು.
Kshetra Samachara
04/09/2025 11:48 am