ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮನೆಗಳಿಗೆ ನುಗ್ಗಿದ ನೀರು - ಹೈರಾಣಾದ ಜನರು

ಬೆಂಗಳೂರು: ರಾತ್ರಿ ಸುರಿದ ಮಳೆಯಿಂದ ನಗರದ ಕೆಲ ಭಾಗದ ಜನರು ರಾತ್ರಿ ಇಡೀ ಜಾಗರಣೆ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ.ರಾಜಾಜಿನಗರ ಮಂಜುನಾಥನಗರದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನಿವಾಸಿಗಳು ರಾತ್ರಿ ಇಡೀ ಪರದಾಡಿದ್ದಾರೆ. ನೆಲಮಹಡಿಯಲ್ಲಿದ್ದ ಮನೆಯ ಕಿಚನ್, ಹಾಲ್‌ಗಳಿಗೆ ಚರಂಡಿ ಮಿಶ್ರಿತ ನೀರು ನುಗ್ಗಿದೆ. ಈ ನೀರನ್ನು ಮನೆಯಿಂದ ಹೊರಹಾಕಲು ರಾತ್ರಿ ಇಡೀ ಒದ್ದಾಡಿದ್ದಾರೆ‌. ಮಳೆ ನೀರು ಸುಗಮವಾಗಿ ಹರಿದು ಹೋಗಲು ಸರಿಯಾದ ವ್ಯವಸ್ಥೆ ಮಾಡದ ಹಿನ್ನೆಲೆ ಈ ರೀತಿಯ ಸಮಸ್ಯೆ ಸೃಷ್ಟಿಯಾಗಿದೆ.

Edited By :
Kshetra Samachara

Kshetra Samachara

07/09/2025 12:04 pm

Cinque Terre

734

Cinque Terre

0

ಸಂಬಂಧಿತ ಸುದ್ದಿ