ನೆಲಮಂಗಲ: ನೆಲಮಂಗಲ ತಾಲೂಕಿನ ದಾಸೇನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡು ಸಾಕು ನಾಯಿಯನ್ನ ಹೊತ್ತೊಯ್ಯಲು ಅಟ್ಟಾಡಿಸಿಕೊಂಡು ಹೋದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
ದಾಸೇನಹಳ್ಳಿ ಗ್ರಾಮದ ಮಾಸ್ಟರ್ ಜಗಣ್ಣ ಎಂಬುವರಿಗೆ ಸೇರಿದ ಮನೆ ಸಮೀಪದಲ್ಲಿ ಈ ದೃಶ್ಯ ಕಂಡು ಬಂದಿದೆ. ಚಿರತೆ ಚಲನವಲನದ ದೃಶ್ಯ ಕಂಡ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರ ಮನವಿ ಮಾಡಿದ್ದಾರೆ..
PublicNext
09/09/2025 01:41 pm