ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಚಿಕಿತ್ಸೆ ಫಲಿಸದೆ ಪೊಲೀಸ್ ಕಾನ್ಸ್‌ಟೇಬಲ್ ಸಾವು !

ಧಾರವಾಡ : ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಕೆಎಸ್‌ಆರ್‌ಪಿ ಪೊಲೀಸ್ ಕಾನ್ಸ್​ಟೇಬಲ್​ ಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ಕಮಲಾಪುರದ ನಿವಾಸಿಯಾಗಿದ್ದ ದಿನೇಶ್ ವಾಡ್ಕರ್ ಎಂಬುವವರೇ ಸಾವನ್ನಪ್ಪಿದ ಕಾನ್ಸ್​ಟೇಬಲ್​ .

ಕಳೆದ ಕೆಲ ದಿನಗಳ ಹಿಂದೆ ಧಾರವಾಡದ ಜೆಎಸ್‌ಎಸ್ ಕಾಲೇಜು ಬಳಿ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಘಟನೆಯಲ್ಲಿ ಪೊಲೀಸ್ ಕಾನ್ಸ್​ಟೇಬಲ್ ದಿನೇಶ್ ಗಂಭೀರವಾಗಿ ಗಾಯಗೊಂಡಿದ್ದರು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದರೂ ಚಿಕಿತ್ಸೆಗೆ ಸ್ಪಂದಿಸದ ಅವರು ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

ಧಾರವಾಡ ಸಂಚಾರ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

09/09/2025 06:07 pm

Cinque Terre

17.48 K

Cinque Terre

2

ಸಂಬಂಧಿತ ಸುದ್ದಿ