ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ : ಮೂಡ್ಕೂರು ಅಡಿಕೆ ಕಳವು ಪ್ರಕರಣ –12 ಮಂದಿ ಆರೋಪಿಗಳು ಬಂಧನ

ಕಾರ್ಕಳ : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡ್ಕೂರು ತೋಟದ ಮನೆಯಲ್ಲಿ ನಡೆದಿದ್ದ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 23, 2025ರಂದು ಸಂಭವಿಸಿದ್ದ ಕಳವು ಪ್ರಕರಣದ ತನಿಖೆ ವೇಳೆ, ಕಾರ್ಕಳ ವೃತ್ತ ನಿರೀಕ್ಷಕರಾದ ಮಂಜಪ್ಪ ಅವರ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಠಾಣೆಯ ಪಿಎಸ್ಐ ಪ್ರಸನ್ನ, ಎಎಸ್‌ಐ ಸುಂದರ ಗೌಡ ಹಾಗೂ ಸಿಬ್ಬಂದಿಗಳಾದ ರುದ್ರೇಶ್, ಚಂದ್ರಶೇಖರ, ಮಹಾಂತೇಶ್ ಮತ್ತು ಜಿಲ್ಲಾ ಪೊಲೀಸ್ ಕಚೇರಿಯ ಸಿಡಿಆರ್ ಸಿಬ್ಬಂದಿಗಳಾದ ದಿನೇಶ್, ನಿತಿನ್ ಸೇರಿ ತಂಡ ಕಾರ್ಯಾಚರಣೆ ನಡೆಸಿತು.

ಪೊಲೀಸರು ಆರೋಪಿಗಳಿಂದ ರೂ. 5 ಲಕ್ಷ ಮೌಲ್ಯದ 1100 ಕೆ.ಜಿ. ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಕಾನೂನು ಸಂಘರ್ಷಕ್ಕೆ ಒಳಪಟ್ಟಿರುವುದರಿಂದ ಅವರ ಹೆಸರನ್ನು ಬಹಿರಂಗಪಡಿಸಲಾಗಿಲ್ಲ.

ಈ ಕಾರ್ಯಾಚರಣೆ ಉಡುಪಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಹರಿರಾಮ್ ಶಂಕರ್ (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಸುಧಾಕರ್ ಮತ್ತು ಸಹಾಯಕ ಪೊಲೀಸ್ ಅಧಿಕ್ಷಕರಾದ ಹರ್ಷ ಪ್ರಿಯಾಂವದ (ಐಪಿಎಸ್) ಅವರ ಮಾರ್ಗದರ್ಶನದಲ್ಲಿ ನಡೆದಿದೆ.

Edited By :
PublicNext

PublicNext

09/09/2025 07:55 pm

Cinque Terre

9.58 K

Cinque Terre

0

ಸಂಬಂಧಿತ ಸುದ್ದಿ