", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/463655-1757499597-manjunath---2025-09-10T154943.930.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಾಥ ವಾಹನಗಳನ್ನು ಗುರುತಿಸಿ ಪೊಲೀಸ್ ಇಲಾಖೆಯ ಸಂಚಾರ ವಿಭಾಗಕ್ಕೆ ಪಟ್ಟಿ ನೀಡಲು ಆಯುಕ್ತರಾದ ರ...Read more" } ", "keywords": "anatha vahana, varasudaararillada vehicles, identify abandoned vehicles, police traffic department, rajendra cholan, karnataka traffic rules, abandoned vehicle list, kannada news, traffic police action", "url": "https://dashboard.publicnext.com/node" }
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಾಥ ವಾಹನಗಳನ್ನು ಗುರುತಿಸಿ ಪೊಲೀಸ್ ಇಲಾಖೆಯ ಸಂಚಾರ ವಿಭಾಗಕ್ಕೆ ಪಟ್ಟಿ ನೀಡಲು ಆಯುಕ್ತರಾದ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ತುಂಬಾ ದಿನಗಳಿಂದ ರಸ್ತೆ ಬದಿಯೇ ನಿಂತಿರುವಂತಹ ಅನಾಥ (ವಾರಸುದಾರರಿಲ್ಲದ) ವಾಹನಗಳಿಂದ ಸುಗಮ ಸಂಚಾರಕ್ಕೆ ಸಾಕಷ್ಟು ಸಮಸ್ಯೆ ಆಗಿದೆ. ಈ ನಿಟ್ಟಿನಲ್ಲಿ ರಸ್ತೆಗಳ ಮೇಲೆ ಇರುವ ಅನಾಥ ವಾಹನಗಳ ಪಟ್ಟಿಯನ್ನು ತಯಾರಿಸಿ, ಆ ಪಟ್ಟಿಯನ್ನು ಪೊಲೀಸ್ ಇಲಾಖೆಯ ಸಂಚಾರ ವಿಭಾಗಕ್ಕೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಸಂತ ನಗರದ ಮೌಂಟ್ ಕಾರ್ಮೆಲ್ ಬಳಿಯಿರುವ ಆಟೋ ಟಿಪ್ಪರ್ ಮಾಸ್ಟರಿಂಗ್ ಪಾಯಿಂಟ್ಗೆ ಭೇಟಿ ನೀಡಿ 22 ಆಟೋಗಳು, 5 ಕಾಂಪ್ಯಾಕ್ಟರ್ಗಳ ಚಾಲಕ ಮತ್ತು ಸಿಬ್ಬಂದಿ ಜೊತೆ ಮಾತನಾಡಿ, ಸುರಕ್ಷಾ ಸಾಮಗ್ರಿಗಳನ್ನು ಬಳಸಿಕೊಂಡು ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಸೂಚನೆ ನೀಡಿದರು.
ಹೋಟೆಲ್ಗಳು ಮತ್ತು ವಾಣಿಜ್ಯ ಸಂಸ್ಥೆಗಳಿಗೆ ತಮ್ಮ ಆವರಣದಲ್ಲಿ ಯಾವುದೇ ಕಸ ಅಥವಾ ಡೆಬ್ರಿಸ್ ಇರದಂತೆ ಸ್ವಚ್ಛವಾಗಿಟ್ಟುಕೊಳ್ಳಲು ಜಾಗೃತಿ ಮೂಡಿಸಬೇಕು. ಅದನ್ನು ಪಾಲಿಸದಿದ್ದರೆ ಕಠಿಣವಾಗಿ ದಂಡ ವಿಧಿಸಬೇಕು. ಅದರ ಜೊತೆಗೆ ಎಲ್ಲಾ ವಾಣಿಜ್ಯ ಸಂಸ್ಥೆಗಳಿಗೆ ತಮ್ಮ ಆವರಣವನ್ನು ಸ್ವಚ್ಛವಾಗಿ ಕಾಯ್ದುಕೊಳ್ಳುವಂತೆ ನೋಟಿಸ್ಗಳನ್ನು ನೀಡಬೇಕು.
ಕಟ್ಟಡ ನಿರ್ಮಾಣ ಮಾಡುವವರು ಪಾದಚಾರಿ ಮಾರ್ಗದ ಮೇಲೆ ಕಟ್ಟಡ ಭಗ್ನಾವಶೇಷಗಳು ಅಥವಾ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಹಾಕಬಾರದು. ಪಾದಚಾರಿ ಮಾರ್ಗದಲ್ಲಿ ಹಾಕಿ ಪಾಲಿಕೆ ಆಸ್ತಿಯನ್ನು ಹಾನಿಗೊಳಿಸಿದವರಿಗೆ ದಂಡ ವಿಧಿಸಲು ಸೂಚನೆ ನೀಡಿದರು. ಸಡಿಲ ಕಲ್ಲುಗಳು, ಪಾದಚಾರಿ ಮಾರ್ಗದ ಮೇಲೆ ಇಟ್ಟಿರುವ ಕಲ್ಲುಗಳನ್ನು ತೆಗೆದುಹಾಕಬೇಕು.
ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಸಂಚಾರಿ ಜಂಕ್ಷನ್ನಲ್ಲಿ ಸುಗಮವಾದ ಸಂಚಾರ ಇರಬೇಕು. ಈ ಸಂಬಂಧ ಎಲ್ಲಾ ಪ್ರಮುಖ ಜಂಕ್ಷನ್ ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ 200 ಮೀಟರ್ ದೂರದವರೆಗೆ ಗುಂಡಿಗಳು, ಮೇಲ್ಮೈ ಪದರ ಹಾಗೂ ಯಾವುದೇ ಅಸಮತೋಲನಗಳಿಲ್ಲದಂತೆ ವಾಹನಗಳು ಸುಗಮವಾಗಿ ಸಂಚರಿಸುವಂತೆ ಮಾಡಲು ಸೂಚನೆ ನೀಡಿದರು.
ಮಿಲ್ಲರ್ ಟ್ಯಾಂಕ್ ಬಂಡ್ ರಸ್ತೆ ಮತ್ತು ಜಾಸ್ಮಾ ದೇವಿ ಭವನ ರಸ್ತೆ (KSBA, KBA)ಗಳಲ್ಲಿ ಕಾರು ಪಾರ್ಕಿಂಗ್ ಮಾಡಿರುವುದನ್ನು ಗಮನಿಸಿ, ದೀರ್ಘವಾಗಿ ಪಾರ್ಕಿಂಗ್ ಮಾಡಿರುವ ಇಂತಹ ರಸ್ತೆಗಳ ಪಟ್ಟಿಯನ್ನು ಗುರುತಿಸಿ, ಪಾರ್ಕಿಂಗ್ ನೀತಿಯನ್ನು ಬಳಸಿಕೊಂಡು ಪೇ ಅಂಡ್ ಪಾರ್ಕ್ ವ್ಯವಸ್ಥೆಯನ್ನು ಜಾರಿಗೆ ತರಲು ಕ್ರಮವಹಿಸುವಂತೆ ಸೂಚಿಸಿದರು.
Kshetra Samachara
10/09/2025 03:50 pm