ಬೆಂಗಳೂರು: ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ತೀವ್ರಗೊಳಿಸಿ ವಿಧಾನಸೌಧ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಅವರನ್ನು ತಡೆದು ನಿಯಂತ್ರಿಸಿದರು. ಪ್ರತಿಭಟನೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ಭಾಗವಹಿಸಿದ್ದು, ಬಂಜಾರ ಸಮುದಾಯದ ಬಿಜೆಪಿ ಶಾಸಕ ಪಿ. ರಾಜೀವ್ ಅವರು ಈ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.
ಸರ್ಕಾರದ ನಿರ್ಧಾರವನ್ನು ಹಿಂಪಡೆಯದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಈ ಹೋರಾಟ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲದೇ, ವಿಜಯಪುರ, ಹೊಸಪೇಟೆ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿಯೂ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ.
PublicNext
10/09/2025 08:13 pm