ಸುವರ್ಣಸೌಧ/ ಬೆಳಗಾವಿ: ಶಾಲಾ ಮಕ್ಕಳಿಗೆ ಪೌಷ್ಟಿಕಾಂಶ ದೊರೆಯುವಂತಾಗಬೇಕೆಂಬ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಮೊಟ್ಟೆ ಯೋಜನೆಯಿಂದಾಗಿ ಶಿಕ್ಷಕರು ಮತ್ತು ಶಾಲಾ ಅಭಿವೃದ್ಧಿ ಮಂಡಳಿಯವರು ಮೊಟ್ಟೆಯೊಂದಕ್ಕೆ ಒಂದೂವರೆ ರೂಪಾಯಿಗಳನ್ನು ತಮ್ಮ 'ಕಿಸೆ'ಯಿಂದ ಹಾಕುವಂತಾಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಇಂದು ವಿಧಾನಸಭೆ ಕಲಾಪದಲ್ಲಿ ಒತ್ತಿ ಹೇಳಿದರು. ಬಳಿಕ ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿ, ಆದಷ್ಟು ಶೀಘ್ರವೇ ಈ ಬಗ್ಗೆ ಸಂಬಂಧಿಸಿದವರೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದರು.
PublicNext
18/12/2025 03:18 pm
LOADING...