ಬೆಂಗಳೂರು: ಹೆಚ್ಎಎಲ್ನ ಚಿನ್ನಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಸಿಮೆಂಟ್ ಇಟ್ಟಿಗೆಗೆ ನಾಲ್ಕು ವರ್ಷದ ಮಗು ಬಲಿಯಾದ ದಾರುಣ ಘಟನೆ ನಡೆದಿದೆ.
ಸುಬ್ಬಾರಾವ್ ಎಂಬುವವರಿಗೆ ಸೇರಿದ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಕಟ್ಟಡದ ನಾಲ್ಕನೇ ಮಹಡಿಯಿಂದ ಆಕಸ್ಮಿಕವಾಗಿ ಸಿಮೆಂಟ್ ಇಟ್ಟಿಗೆಗಳು ಕೆಳಗೆ ಬಿದ್ದಿವೆ. ಈ ಇಟ್ಟಿಗೆಗಳು ಕಟ್ಟಡದ ಪಕ್ಕದಲ್ಲೇ ಇದ್ದ ಶೀಟ್ ಮನೆಯ ಮೇಲೆ ಅಪ್ಪಳಿಸಿದ್ದು, ಅಲ್ಲಿದ್ದ ಮನುಶ್ರೀ ಎಂಬ ನಾಲ್ಕು ವರ್ಷದ ಮಗು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದೆ. ಘಟನೆ ನಡೆದಾಗ ಸುಮಾರು ಐದಾರು ಸಿಮೆಂಟ್ ಇಟ್ಟಿಗೆಗಳು ಬಿದ್ದಿದ್ದವು ಎಂದು ತಿಳಿದುಬಂದಿದೆ.
ಈ ದುರ್ಘಟನೆಗೆ ಸಂಬಂಧಿಸಿದಂತೆ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಟ್ಟಡ ನಿರ್ಮಾಣದಲ್ಲಿ ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಪಾಲಿಸದಿರುವುದು ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
PublicNext
18/12/2025 07:25 pm
LOADING...