ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ವಂಚನೆ ಪ್ರಕರಣದಲ್ಲಿ ಆರೋಪಿತನಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ಪೊಲೀಸ್ ಠಾಣಾ ಅ.ಕ್ರ 47/2022, ಕಲಂ :406, 420 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಕಡೂರು ಗ್ರಾಮದ ನಿವಾಸಿ ನಾಗೇಶ್ ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನನ್ನು ಸುಳ್ಯ ಪೊಲೀಸ್ ಠಾಣಾ ಹೆಡ್ ಕಾನ್‌ಸ್ಟೇಬಲ್ ರಮೇಶ್ ಹಾಗೂ ಪೊಲೀಸ್ ಕಾನ್‌ಸ್ಟೇಬಲ್ ಶ್ರೀಶೈಲ ಅವರು ಡಿ.18ರಂದು ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Edited By : Nagaraj Tulugeri
Kshetra Samachara

Kshetra Samachara

18/12/2025 10:28 pm

Cinque Terre

932

Cinque Terre

0

ಸಂಬಂಧಿತ ಸುದ್ದಿ