ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸಪೇಟೆ : ರಸ್ತೆ ದಾಟುವ ವೇಳೆ ರಭಸವಾಗಿ ಗುದ್ದಿದ ಅಪರಿಚಿತ ವಾಹನ - ರಸ್ತೆಯಲ್ಲೇ ಕೊನೆಯುಸಿರೆಳೆದ ಚಿರತೆ

ಹೊಸಪೇಟೆ : ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವನ್ನಪ್ಪಿದೆ. ಈ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಅತೀ ವೇಗವಾಗಿ ಓಡಾಟ ನಡೆಸುತ್ತವೆ. ಈ ವೇಳೆ ಚಿರತೆ ಕೂಡಾ ರಸ್ತೆ ದಾಟೋದಕ್ಕೆ ಮುಂದಾಗಿದೆ. ಇದ್ರಿಂದ ವಾಹನ ಬಲವಾಗಿ ಗುದ್ದಿದ್ದಕ್ಕೆ ಚಿರತೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ. ಘಟನಾ ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

19/01/2026 09:51 pm

Cinque Terre

6.16 K

Cinque Terre

0

ಸಂಬಂಧಿತ ಸುದ್ದಿ