ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ನ ಸಮನ್ವಯಾಧಿಕಾರಿಗಳ ಸಭೆ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ. ದಕ್ಷಿಣ ಕನ್ನಡ ಜಿಲ್ಲೆಯ ಜ್ಞಾನ ವಿಕಾಸ ಸಮನ್ವಯಾಧಿಕಾರಿಗಳ ಸಭೆಯನ್ನು ಬಂಟ್ವಾಳ ಉನ್ನತಿ ಸೌಧದ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ನ ದ.ಕ. ಜಿಲ್ಲೆಯ ಗೌರವಾನ್ವಿತ ನಿರ್ದೇಶಕ ದಿನೇಶ್ ಡಿ. ಅವರು ಜ್ಞಾನ ವಿಕಾಸ ಕಾರ್ಯಕ್ರಮದ ಹಾಗೂ 2025-2026ನೇ ಸಾಲಿನ ಗುರಿ ಸಾಧನೆ ಬಗ್ಗೆ ಚರ್ಚಿಸಿ ಮುಂದಿನ ಗುರಿ ಸಾಧನೆ ಬಗ್ಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಪ್ರಾದೇಶಿಕ ವಿಭಾಗದ ಜ್ಞಾನ ವಿಕಾಸ ಯೋಜನಾಧಿಕಾರಿ ಅಮೃತ ರವರು ಹಾಗೂ ಜಿಲ್ಲೆಯ ಎಲ್ಲಾ ತಾಲೂಕಿನ ಸಮನ್ವಯಾಧಿಕಾರಿಯವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

22/01/2026 12:15 pm

Cinque Terre

12.7 K

Cinque Terre

0

ಸಂಬಂಧಿತ ಸುದ್ದಿ