ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ಹೆಗ್ಗಡಪುರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಸಾಮೂಹಿಕ ಗಣಪತಿ ಹೋಮ ಹಾಗೂ ಬಿಲ್ವಾರ್ಚನೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಸೌಮ್ಯ ಅನಿಲ್ ಚಿಕ್ಕಮಾದು, ಇಂದ್ರಮ್ಮ ಮಹದೇವ್, ಭಾಸ್ಕರ್, ಮೈಸೂರು ಜಿಲ್ಲಾ ನಿರ್ದೇಶಕ ವಿ. ವಿಜಯಕುಮಾರ್ ನಾಗನಾಳ, ಎಚ್.ಡಿ.ಕೋಟೆ ಯೋಜನಾಧಿಕಾರಿ ಭಾಸ್ಕರ್ ವಿ. ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಮಹಿಳಾ ಸಬಲೀಕರಣಕ್ಕೆ ಧರ್ಮಸ್ಥಳದ ಕೊಡುಗೆ
ಈ ಸಾಮೂಹಿಕ ಗಣಪತಿ ಹೋಮ, ಬಿಲ್ವಾರ್ಚನೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಮಹಿಳೆಯರ ಜೀವನಕ್ಕೆ ಅತ್ಯಂತ ಸಹಕಾರಿಯಾಗಿವೆ. ಮಹಿಳೆಯರ ಸಬಲೀಕರಣ ಆಗಬೇಕಾದರೆ ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಯೋಜನೆಯಿಂದ ಮಾತ್ರ ಸಾಧ್ಯ ಎಂದು ಕಾರ್ಯಕ್ರಮದಲ್ಲಿ ಒತ್ತಿಹೇಳಲಾಯಿತು. ಪಂಚಾಯತ್ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಮಹಿಳೆಯರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡಿದ್ದು, ಇದು ಮುಂದಿನ ದಿನಗಳಲ್ಲಿ ಧರ್ಮಸ್ಥಳ ಸ್ವಸಹಾಯ ಟ್ರಸ್ಟ್ನ ಮತ್ತಷ್ಟು ಅಭಿವೃದ್ಧಿಗೆ ಸಹಕಾರಿಯಾಗಲಿದೆ.
PublicNext
23/01/2026 09:41 pm
LOADING...