ಬಳ್ಳಾರಿ: ಕಂಟೋನ್ಮೆಂಟ್ ಬಳಿ ಇರುವ ಶಾಸಕ ಜನಾರ್ದನ್ ರೆಡ್ಡಿ ಮಾಲೀಕತ್ವದ ಲೇಔಟ್ನಲ್ಲಿನ ಮಾಡೆಲ್ ಹೌಸ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಅದು ಧಗಧಗ ಹೊತ್ತಿ ಉರಿದಿದೆ. ದುಷ್ಕರ್ಮಿಗಳ ಕೃತ್ಯದಿಂದ ಜನಾರ್ದನ್ ರೆಡ್ಡಿ ಒಡೆತನದ ಮಾಡೆಲ್ ಹೌಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಜೊತೆಗೆ, ಪೊಲೀಸರು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಸಂಬಂಧ ಬಳ್ಳಾರಿ ಎಸ್ಪಿ ಜೊತೆ ಶಾಸಕ ಜನಾರ್ದನ್ ರೆಡ್ಡಿ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ವಿಶೇಷ ಅಧಿವೇಶನದಲ್ಲಿ ಭಾಗವಹಿಸಿದ್ದ ಜನಾರ್ದನ್ ರೆಡ್ಡಿ, ಅಧಿವೇಶನ ಮುಗಿದ ನಂತರ ತಕ್ಷಣವೇ ಬಳ್ಳಾರಿಯತ್ತ ಪ್ರಯಾಣ ಬೆಳೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
PublicNext
23/01/2026 09:58 pm
LOADING...