ಕೋಲಾರ: ಕೋಲಾರದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಸಂವಿಧಾನವು ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಭದ್ರ ಬುನಾದಿಯ ಮೇಲೆ ನಿಂತಿದೆ ಎಂದು ಪ್ರತಿಪಾದಿಸಿದರು.
ಸಮ ಸಮಾಜ ನಿರ್ಮಾಣಕ್ಕೆ ಸರ್ಕಾರದ ಸಂಕಲ್ಪ
"ಸಂವಿಧಾನದ ಆಶಯಗಳನ್ನು ಜಾರಿಗೆ ತರುವ ಮೂಲಕ ಹಸಿವು ಮುಕ್ತ ಹಾಗೂ ಮೌಡ್ಯ ಮುಕ್ತ ಸಮ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಪಣತೊಟ್ಟಿದೆ" ಎಂದು ಸಚಿವ ಬಿ.ಎಸ್. ಸುರೇಶ್ ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಜಾಗತಿಕ ಮನ್ನಣೆ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಶ್ಲಾಘಿಸಿದ ಸಚಿವರು, ಇವು ಯುನಿವರ್ಸಲ್ ಬೇಸಿಕ್ ಇನ್ಕಮ್ ತತ್ವದಡಿ ರೂಪುಗೊಂಡಿದ್ದು, ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿ ಜೀವನಮಟ್ಟವನ್ನು ಸುಧಾರಿಸಿವೆ ಎಂದು ತಿಳಿಸಿದರು. ಈ ಯೋಜನೆಗಳ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಕುರಿತು ಕಿಂಗ್ಸ್ ಕಾಲೇಜ್ ಲಂಡನ್ನಂತಹ ಜಾಗತಿಕ ಸಂಸ್ಥೆಗಳು ಅಧ್ಯಯನ ನಡೆಸುತ್ತಿರುವುದು ಅವುಗಳ ಮಹತ್ವಕ್ಕೆ ಸಾಕ್ಷಿ ಎಂದರು. ಇದರೊಂದಿಗೆ, ಇ-ಖಾತಾ ಮತ್ತು ಭೂ ಗ್ಯಾರಂಟಿಯಂತಹ ಹೊಸ ಉಪಕ್ರಮಗಳ ಮೂಲಕ ಆಸ್ತಿ ಸುರಕ್ಷತೆಗೂ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಅವರು ಉಲ್ಲೇಖಿಸಿದರು.
Kshetra Samachara
26/01/2026 11:01 am
LOADING...