ಬಳ್ಳಾರಿ: ಗಣಿನಗರಿ ಬಳ್ಳಾರಿಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅದ್ದೂರಿ ಸಂಭ್ರಮದಿಂದ ಆಚರಿಸಲಾಯಿತು. ನಗರದ ಬಿಮ್ಸ್ ಕಾಲೇಜು ಮೈದಾನದಲ್ಲಿ ನಡೆದ ಮುಖ್ಯ ಸಮಾರಂಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ, ಪೊಲೀಸ್, ಗೃಹರಕ್ಷಕ ದಳ, ಸ್ಕೌಟ್ ಆ್ಯಂಡ್ ಗೈಡ್, ಎನ್ಸಿಸಿ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ನಡೆದ ಆಕರ್ಷಕ ಪಥಸಂಚಲನವು ನೆರೆದಿದ್ದವರ ಗಮನ ಸೆಳೆಯಿತು. ಸಚಿವ ರಹೀಂ ಖಾನ್ ಅವರು ತೆರೆದ ವಾಹನದಲ್ಲಿ ಸಂಚರಿಸಿ ಪೊಲೀಸ್ ಮತ್ತು ಇತರೆ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.
PublicNext
26/01/2026 04:37 pm
LOADING...