ಮಂಚೇನಹಳ್ಳಿ : ಸರ್ಕಾರಿ ಶಾಲಾ ಆವರಣದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ ಧ್ವಜಾರೋಹಣ ಕಾರ್ಯಕ್ರಮ ಸಂದರ್ಭ ತಹಶೀಲ್ದಾರ್ ಪೂರ್ಣಿಮಾ ಅವರು ಧ್ವಜಾರೋಹಣ ನೆರವೇರಿಸಿ ಅಧಿಕಾರಿಗಳಿಂದ ತಪ್ಪಾಗಿದೆ ಎಂದು ಹೇಳಿದ್ದಾರೆ.
ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಧ್ವಜ ತಲೆಕೆಳಗಾಗಿ ಹಾರಿದೆ. ಅದು ಆಕಸ್ಮಿಕವಾಗಿ ಆಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಸಿ ಕಟ್ಟುನಿಟ್ಟಾದ ಕ್ರಮಗಳನ್ನು ವಹಿಸುವಂತೆ ತಿಳಿಸಿದ್ದೆ. ಆದರೆ, ಈ ಘಟನೆಗೆ ಕಾರಣರಾಗಿರುವವರ ವಿರುದ್ಧ ಸೂಕ್ತ ಕ್ರಮ ವಹಿಸುತ್ತೇವೆ ಎಂದರು.
PublicNext
26/01/2026 07:36 pm
LOADING...