ಮೈಸೂರು:- ನಕಲಿ ಒಡವೆಗಳನ್ನ ಗಿರವಿ ಇಟ್ಟು ಖಾಸಗಿ ಬ್ಯಾಂಕ್ ಗೆ ವಂಚಿಸಿದ ಆರೋಪದ ಮೇಲೆ ಚಿನ್ನಾಭರಣ ಮೌಲ್ಯಮಾಪಕ ಸೇರಿದಂತೆ 7 ಮಂದಿ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ತಮಿಳುನಾಡು ಮೂಲದ ಮರ್ಕೆಂಟೈಲ್ ಬ್ಯಾಂಕ್ ಗೆ ವಂಚಕರು 56.78 ಲಕ್ಷ ಉಂಡೆನಾಮ ಹಾಕಿದ್ದಾರೆ.
ಬ್ಯಾಂಕ್ ನ ಮುಖ್ಯಸ್ಥರಾದ ಸುರೇಶ್ ಕಣ್ಣನ್ ವಂಚನೆ ಪ್ರಕರಣ ದಾಖಲಿಸಿದ್ದಾರೆ.ಮೈಸೂರಿನ ಅಬ್ದುಲ್ ಜಮೀಲ್,ಮಂಡ್ಯದ ಸಾಗರ್,ಪುಟ್ಟರಾಜು,ರವಿಕುಮಾರ್,ಈತನ ಪತ್ನಿ ದಿವ್ಯ, ಬೆಂಗಳೂರಿನ ನಾಗರತ್ನರೆಡ್ಡಿ ಹಾಗೂ ಮೌಲ್ಯಮಾಪಕ ಟಿ.ನರಸೀಪುರದ ರವೀಂದ್ರ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
Kshetra Samachara
30/01/2026 12:36 pm
LOADING...