ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಜ್ಜಂಪುರ: ಮನೆಯಲ್ಲಿದ್ದ ಸಾವಿರಾರು ನಗದು ಸೇರಿ ಕಾಣಿಕೆ ಹುಂಡಿ ಕಳವು

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದ ಶ್ರೀನಿವಾಸ್ ರಸ್ತೆಯ ನಿವಾಸಿ ಲೋಹಿತ್ ಕುಮಾರ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಕಳೆದ ಶನಿವಾರ ಹಾಗೂ ಭಾನುವಾರ ಮನೆಯಲ್ಲಿ ಯಾರು ಇರಲಿಲ್ಲ ಈ ಸಂದರ್ಭವನ್ನು ಗುರಿಯಾಗಿಸಿಟ್ಟುಕೊಂಡು ಖದೀಮರು ಮನೆಯ ಮುಂಭಾಗದ ಎರಡು ಬಾಗಿಲುಗಳ ಬೀಗ ಒಡೆದು ಮನೆಯೊಳಗಿನ ಕಪಾಟಿನಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿಗೊಳಿಸಿ ಸುಮಾರು 25,000 ದಿಂದ 30,000 ರೂಪಾಯಿ ನಗದು ಹಣ ಹಾಗೂ ದೇವರ ಮನೆಯ ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಿದ್ದಾರೆ. ಮನೆಯ ಇತರ ಬೆಲೆಬಾಳುವ ವಸ್ತುಗಳನ್ನು ಪರಿಶೀಲಿಸಿದಾಗ ಅವು ಸುರಕ್ಷಿತವಾಗಿರುವುದು ಕಂಡುಬಂದಿದೆ.

ಈ ಘಟನೆ ಕುರಿತು ಲೋಹಿತ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ಕಳ್ಳರ ಪತ್ತೆಗಾಗಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

03/02/2026 10:00 pm

Cinque Terre

600

Cinque Terre

0

ಸಂಬಂಧಿತ ಸುದ್ದಿ