ಉಡುಪಿ: ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಪ್ರವಾಸಿ ಬೋಟ್ ಸಹಿತ ವಾಟರ್ಸ್ಪೋರ್ಟ್ಸ್ಗೆ ಸಂಬಂಧಿಸಿ 149 ಬೋಟ್ ಮಾಲಕರ ಜತೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡಿ ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಈಗಾಗಲೇ ವಿವಿಧ ಇಲಾಖೆಗಳಿಂದ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಹಾಗೂ ಪರವಾನಗಿ ಪಡೆಯಲು 45 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ಈ ನಿಯಮಾವಳಿಯನ್ನು ಮೀರಿ ಜಲಕ್ರೀಡೆ ನಡೆಸುವುದು ಕಂಡುಬಂದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಜಿಲ್ಲೆಯಲ್ಲಿರುವ ಪ್ರವಾಸಿ ಬೋಟ್, ಹೌಸ್ ಬೋಟ್, ಕಯಾಕಿಂಗ್, ಪ್ರವಾಸಿ ದೋಣಿ, ಪ್ಯಾರಾಚೂಟ್, ಬನಾನಾ ರೈಡ್, ಸರ್ಫಿಂಗ್, ಜೆಟ್ಸ್ಕಿ, ಬಂಪಿ, ಬೋಟ್ ರೌಂಡಿಂಗ್, ವಾಟರ್ಸ್ಪೋರ್ಟ್ಸ್ ನಡೆಸುತ್ತಿದ್ದು, ಇವುಗಳಿಗೆ ವಿವಿಧ ಇಲಾಖೆಗಳಿಂದ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಹಾಗೂ ಪರವಾನಗಿ ಪಡೆಯಲು 45 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದರು.
ಜಲಕ್ರೀಡೆ ನಡೆಸುವ ಸಮಯದಲ್ಲಿ ಪ್ರವಾಸಿಗರಿಗೆ ಲೈಫ್ ಜಾಕೆಟ್ ಕಡ್ಡಾಯವಾಗಿ ಧರಿಸುವಂತೆ ಕ್ರಮ ವಹಿಸಬೇಕು. ಲೈಫ್ ಬಾಯ್, ಪ್ರಥಮ ಚಿಕಿತ್ಸಾ ಕಿಟ್, ಅಗ್ನಿಶಾಮಕ ಸಾಧನ ಹಾಗೂ ಇನ್ನಿತರ ಸುರಕ್ಷಾ ಸಲಕರಣೆಗಳನ್ನು ದೋಣಿಯಲ್ಲಿ ಇಟ್ಟುಕೊಳ್ಳಬೇಕು. ಸಂಬಂಧಿಸಿದ ಮಾಲಕರು ಜಲಕ್ರೀಡೆ ನಡೆಸುವ ಸ್ಥಳದಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಫಲಕಗಳನ್ನು ಅಳವಡಿಸಿ ಅರಿವು ಮೂಡಿಸಬೇಕು. ಫಿಟ್ನೆಸ್ ಪತ್ರವನ್ನು ಹೊಂದಿದವರು ಮಾತ್ರ ಬೋಟ್ ಚಲಾಯಿಸಬೇಕು ಎಂದರು. ದಿನಗಳಲ್ಲಿ ಶಿಕ್ಷಕರೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಪೈಶಾಚಿಕ ಕೃತ್ಯಗಳು ಹೆಚ್ಚಾಗುತ್ತಿರುವುದು ಪೋಷಕರಲ್ಲಿ ತೀವ್ರ ಆಘಾತ ಮತ್ತು ಆತಂಕ ಮೂಡಿಸಿದೆ.ವಿದ್ಯಾರ್ಥಿನಿಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪ್ರತಿಷ್ಠಿತ ಸಂಸ್ಥೆಯಲ್ಲೇ ಇಂತಹ ಘಟನೆ ನಡೆದಿರುವುದು ಚಿತ್ರದುರ್ಗದ ಜನರು ಬೆಚ್ಚಿಬಿದ್ದಿದ್ದಾರೆ. ಶಿಕ್ಷಕರೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. ಒಂದು ಕಾಲದಲ್ಲಿ ಮಕ್ಕಳು ಶಾಲೆಗೆ ಹೋದರೆ ಸುರಕ್ಷಿತರಾಗಿರುತ್ತಾರೆ ಎಂಬ ಭಾವನೆಯಿತ್ತು. ಆದರೆ ಇತ್ತೀಚೆಗೆ ದಿನ ಬೆಳಗಾದರೆ ಶಾಲಾ ಮಕ್ಕಳ ಮೇಲೆ ಶಿಕ್ಷಕರೇ ಎಸಗುತ್ತಿರುವ ಪೈಶಾಚಿಕ ಕೃತ್ಯಗಳು ಪೋಷಕರಿಗೆ ಆಘಾತವುಂಟುಮಾಡಿವೆ.
PublicNext
03/02/2026 10:04 pm