ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

​ಕೊಪ್ಪಳ: ಅಕ್ರಮ ಸಾಗಾಟ; 31 ಜಾನುವಾರುಗಳ ರಕ್ಷಣೆ, ಕಂಟೇನರ್ ವಶ

ಕೊಪ್ಪಳ: ಮಹಾರಾಷ್ಟ್ರದಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 27 ಹಸುಗಳು ಹಾಗೂ 4 ಎಮ್ಮೆಗಳನ್ನು ಕೊಪ್ಪಳದಲ್ಲಿ ರಕ್ಷಿಸಲಾಗಿದೆ.

​ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್ ಮೂಲಕ ಜಾನುವಾರುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ, ರಾಷ್ಟ್ರೀಯ ರಕ್ಷಣಾ ಪಡೆ, ಗದಗದ ಭಗತ್ ಸಿಂಗ್ ಸೇವಾ ಸಮಿತಿ ಹಾಗೂ ಕೊಪ್ಪಳದ ಭಜರಂಗದಳದ ಕಾರ್ಯಕರ್ತರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಾಹನವನ್ನು ತಡೆದಿದ್ದಾರೆ.

​ರಕ್ಷಿಸಲಾದ ಎಲ್ಲಾ ಜಾನುವಾರುಗಳನ್ನು ಸುರಕ್ಷಿತವಾಗಿ ಕೊಪ್ಪಳದ ಜೈನ್ ಗೋಶಾಲೆಗೆ ಸೇರಿಸಲಾಗಿದೆ. ಈ ಕುರಿತು ಕಂಟೇನರ್ ಮಾಲೀಕ ಹಾಗೂ ಚಾಲಕನ ವಿರುದ್ಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Edited By : Vinayak Patil
Kshetra Samachara

Kshetra Samachara

05/03/2026 06:51 pm

Cinque Terre

8.3 K

Cinque Terre

0