ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ​ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಭಿವೃದ್ಧಿ ಶೂನ್ಯ; ಬಸವರಾಜ ಬೊಮ್ಮಾಯಿ

​ಹಾವೇರಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಕಳಪೆಯಾಗಿದ್ದು, ಇದು ಅಭಿವೃದ್ಧಿ ಶೂನ್ಯ ಹಾಗೂ ಪ್ರಗತಿರಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

​ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

​ ರಾಜ್ಯ ಸರ್ಕಾರವು ಅತೀ ಹೆಚ್ಚು ಸಾಲ ಮಾಡುವ ಮೂಲಕ ಜನರನ್ನು ಸಾಲದ ಶೂಲಕ್ಕೆ ತಳ್ಳುತ್ತಿದೆ. ಈಗಾಗಲೇ ಸುಮಾರು 1.32 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದ್ದು, ಈಗ ಮತ್ತೆ 25 ಸಾವಿರ ಕೋಟಿ ರೂಪಾಯಿ ಹೊಸ ಸಾಲಕ್ಕೆ ಮುಂದಾಗಿದೆ ಎಂದರು.

​ಈ ಬಜೆಟ್ ಯಾವುದೇ ನಿರ್ದಿಷ್ಟ ಗುರಿ ಅಥವಾ ದಿಕ್ಕಿಲ್ಲದಂತಿದೆ. ರಾಜ್ಯವನ್ನು ಕನಿಷ್ಠ 15 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ.

​ 17 ಬಾರಿ ಬಜೆಟ್ ಮಂಡಿಸಿದ ಅನುಭವವಿರುವ ಸಿದ್ದರಾಮಯ್ಯನವರಿಂದ ಇಂತಹ ಕಳಪೆ ಬಜೆಟ್ ನಿರೀಕ್ಷಿಸಿರಲಿಲ್ಲ. ಇದು ರಾಜ್ಯದ ಜನತೆಗೆ ತೀವ್ರ ನಿರಾಸೆ ಮೂಡಿಸಿದೆ ಎಂದು ಅವರು ತಿಳಿಸಿದರು.

Edited By : Vinayak Patil
PublicNext

PublicNext

06/03/2026 06:22 pm

Cinque Terre

12.69 K

Cinque Terre

1

ಸಂಬಂಧಿತ ಸುದ್ದಿ