ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನಲ್ಲಿ ನಡೆದ ದುರದೃಷ್ಟಕರ ಘಟನೆಯೊಂದರಲ್ಲಿ, ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದಾಗಿ ೮ ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳದ ತೆನೆರಾಶಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ನಾಗಪ್ಪ ಬಣಕಾರ, ಸಚೀನ್ ಹೊಸಳ್ಳಿ ಮತ್ತು ಮಾಲತೇಶ್ ದೇಸೂರ ಎಂಬ ಮೂವರು ರೈತರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಒಂದೇ ಕಣದಲ್ಲಿ ರಾಶಿ ಮಾಡಲಾಗಿತ್ತು. ಈ ಜಮೀನುಗಳನ್ನು ಶಿವರಾಜ ಕರಿಯಪ್ಪ ಉಜನಿ ಎಂಬ ರೈತ ಲಾವಣಿಗೆ ಪಡೆದು ಕೃಷಿ ಮಾಡುತ್ತಿದ್ದರು. ಕಿಡಿಗೇಡಿಗಳ ಈ ಕೃತ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳದ ತೆನೆರಾಶಿ ಸುಟ್ಟು ಕರಕಲಾಗಿದ್ದು, ರೈತರಿಗೆ ಭಾರಿ ನಷ್ಟ ಉಂಟಾಗಿದೆ.
ಮೆಕ್ಕೆಜೋಳದ ರಾಶಿಗೆ ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದರು. ಈ ಘಟನೆ ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಿಡಿಗೇಡಿಗಳ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.
PublicNext
07/03/2026 10:32 pm
LOADING...