ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲೆನ್ಸ್ ಹಾಕಲು ಲಂಚಕ್ಕೆ ಬೇಡಿಕೆ : ಲೋಕಾ ಬಲೆಗೆ ಬಿದ್ದ ಜಿಲ್ಲಾಸ್ಪತ್ರೆ ವೈದ್ಯೆ ಡಾ. ಸವಿತಾ

ತುಮಕೂರು: ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಲಂಚಾವತಾರ ತಾಂಡವವಾಡುತ್ತಿದೆ ಎಂಬುದು ಮತ್ತೊಮ್ಮೆ ಸಾಭೀತಾಗಿದೆ.

ಕಣ್ಣಿನ ಶಸ್ತ್ರ ಚಿಕಿತ್ಸೆಯ ಲೆನ್ಸ್ ಹಾಕಲು 6000 ರೂ ಲಂಚ ಪಡೆಯುವಾಗ ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯೆ ಮತ್ತು ಹೊರಗುತ್ತಿಗೆ ನೌಕರ ತುಮಕೂರು ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಜಿಲ್ಲಾ ಆಸ್ಪತ್ರೆಯ ಡಾ. ಸವಿತಾ ಮತ್ತು ಹೊರಗುತ್ತಿಗೆ ನೌಕರ ಮನೋಜ್ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತುಮಕೂರಿನ ಉಪ್ಪಾರಹಳ್ಳಿ ವಾಸಿ ಅವಿನಾಶ್ ಎಂಬುವರು ತಮ್ಮ ತಾಯಿ ಮಂಗಳಮ್ಮ ಎಂಬುವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದು ಕೊಂಡು ಹೋಗಿ ಕಣ್ಣನ್ನು ತೋರಿಸಿದರು. ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಲೆನ್ಸ್ ಹಾಕಬೇಕು ಆರು ಸಾವಿರ ರೂ ಕೊಟ್ಟರೆ ಆಪರೇಷನ್‌ ಮಾಡಿಕೊಡುವುದಾಗಿ ಹೇಳಿದರಂತೆ. ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲವೂ ಉಚಿತ ಹಣ ಏಕೆ ನೀಡಬೇಕು ಎಂದು ಅವಿನಾಶ್ ಕೇಳಿದಾಗ ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಉಚಿತವಾಗಿ ಶಾಸ್ತ್ರ ಚಿಕಿತ್ಸೆ ಮಾಡುತ್ತಾರೆ ಬೇಕಾದರೆ ಬರೆದುಕೊಡುತ್ತೇನೆ ಅಲ್ಲಿಗೆ ಹೋಗಿ ಮಾಡಿಸಿಕೊಂಡು ಬನ್ನಿ ಎಂದು ಹೇಳಿದರೆ ನ್ನಲಾಗಿದೆ.

6000 ರೂ ಲಂಚ ಕೊಡಲು ಒಪ್ಪದ ಅವಿನಾಶ್, ತುಮಕೂರು ಲೋಕಾಯುಕ್ತ ಪೊಲೀಸರ ಮೊರೆ ಹೋದರು. ಹಣ ಪಡೆಯಬೇಕಾದರೆ ಹೊರಗುತ್ತಿಗೆ ನೌಕರ ಮನೋಜ್ ಮತ್ತು ವೈದ್ಯರಾದ ಸವಿತಾ ರವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್ ಪಿ ಲಕ್ಷ್ಮಿ ನಾರಾಯಣ್ ನೇತೃತ್ವದಲ್ಲಿ ಡಿವೈಎಸ್ಪಿಗಳಾದ ಸಂತೋಷ್‌, ಮಂಜುನಾಥ್, ಇನ್ಸ್ಫೆಕ್ಟರ್ ಗಳಾದ ರಾಜು, ಮಹಮದ್‌ ಸಲೀಂ ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

10/03/2026 08:48 am

Cinque Terre

2.1 K

Cinque Terre

0

ಸಂಬಂಧಿತ ಸುದ್ದಿ