ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಿಂದ ಕೇರಳಕ್ಕೆ ಅಕ್ರಮವಾಗಿ ಬಿಳಿಕಲ್ಲು ಸಾಗಣೆ ಮಾಡುತ್ತಿದ್ದ ಲಾರಿ ವಶಪಡಿಸಿಕೊಂಡಿರುವ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಲಾರಿ ಮಾಲೀಕನಿಗೆ ಅರವತ್ತೇಳು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಪರವಾನಗಿ ಪಡೆಯದೆ ಗುಂಡ್ಲುಪೇಟೆ ಮೂಲಕ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಬಿಳಿಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿ ಇಲಾಖೆ ಅಧಿಕಾರಿಗಳು ಲಾರಿ ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ.
Kshetra Samachara
11/03/2026 08:29 am
LOADING...