ಸಕಲೇಶಪುರ: ಜಲ ಜೀವನ ಮಿಷನ್ (JJM) ಯೋಜನೆಯಡಿ ಹಲವು ಗ್ರಾಮಗಳಲ್ಲಿ ನೀರಿನ ಘಟಕಗಳ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಅವುಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ಒದಗಿಸದೇ ಇರುವ ಸಮಸ್ಯೆಯನ್ನು ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ವಿಧಾನಸಭಾ ಸದನದಲ್ಲಿ ಪ್ರಸ್ತಾಪಿಸಿದರು.
ಈ ಕುರಿತು ಸದನದಲ್ಲಿ ಮಾತನಾಡಿದ ಶಾಸಕ ಮಂಜು, ಸರ್ಕಾರವು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಜಲ ಜೀವನ ಮಿಷನ್ ಯೋಜನೆಯಡಿ ಸಾಕಷ್ಟು ಹಣ ಖರ್ಚು ಮಾಡಿ ನೀರಿನ ಘಟಕಗಳನ್ನು ನಿರ್ಮಿಸಿದೆ. ಆದರೆ ಹಲವೆಡೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ ವಿದ್ಯುತ್ ಸಂಪರ್ಕದ ಕೊರತೆಯಿಂದ ನೀರಿನ ಘಟಕಗಳು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಗಮನಕ್ಕೆ ತಂದರು.
ಇದರಿಂದ ಗ್ರಾಮಸ್ಥರಿಗೆ ನಿರೀಕ್ಷಿತ ಪ್ರಯೋಜನ ದೊರೆಯದೇ ಇರುವುದರಿಂದ ಜನರಲ್ಲಿ ಅಸಮಾಧಾನ ಮೂಡುತ್ತಿದೆ. ಆದ್ದರಿಂದ ಈಗಾಗಲೇ ಪೂರ್ಣಗೊಂಡಿರುವ ನೀರಿನ ಘಟಕಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಿ ಯೋಜನೆಯ ಸದುಪಯೋಗವನ್ನು ಜನರಿಗೆ ತಲುಪಿಸಬೇಕು ಎಂದು ಅವರು ಸರ್ಕಾರದ ಗಮನಕ್ಕೆ ತಂದರು.
ಗ್ರಾಮೀಣ ಜನತೆಗೆ ಕುಡಿಯುವ ನೀರಿನ ಸಮಸ್ಯೆ ದೊಡ್ಡ ಸಮಸ್ಯೆಯಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಶೀಘ್ರದಲ್ಲೇ ಈ ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು ಎಂದು ಶಾಸಕ ಮಂಜು ಆಗ್ರಹಿಸಿದರು.
ಜನರ ಮೂಲಭೂತ ಅಗತ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಯಾಗಿ ಒದಗಿಸುವುದು ಸರ್ಕಾರದ ಪ್ರಮುಖ ಹೊಣೆಗಾರಿಕೆ ಆಗಿದ್ದು, ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿರುವುದು ಜನಪರ ಕಾಳಜಿಯನ್ನೇ ತೋರಿಸುತ್ತದೆ ಎಂದು ಕ್ಷೇತ್ರದ ಜನರು ಅಭಿಪ್ರಾಯಪಟ್ಟಿದ್ದಾರೆ.
PublicNext
11/03/2026 08:09 pm
LOADING...