ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡ್ರಗ್ಸ್ ದಂದೆ,ಬಡ್ಡಿ ಹಾವಳಿಗೆ ಕಡಿವಾಣ ಹಾಕಲು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ಆತೀಕ್ ಅಹಮದ್ ಒತ್ತಾಯ

ತುಮಕೂರು ನಗರದಲ್ಲಿ ಡ್ರಗ್ಸ್ ಹಾವಳಿ ಮತ್ತು ಮೀಟರ್ ಬಡ್ಡಿ ದಂಧೆ ಹೆಚ್ಚಾಗಿದ್ದು, ಇದರಿಂದ ಕೊಲೆ, ಸುಲಿಗೆಗಳು ನಡೆಯುತ್ತಿದ್ದು, ಜಿಲ್ಲಾ ಪೊಲೀಸರು ತಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಮುಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ಆತೀಕ್ ಅಹಮದ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೀಟರ್ ಬಡ್ಡಿ ದಂಧೆ ಒಂದು ವರ್ಷ ಹಿಂದೆ ಸದಾಶಿವನಗರದ ಮಸೀದಿ ಹತ್ತಿರದಲ್ಲಿ ನಾಲ್ಕು ಜನರ ಒಂದು ಕುಟುಂಬ ಆತ್ಮಹತ್ಯೆಗೆ ಶರಣಾಗಿದ್ದನ್ನು ನಾವು ಕಾಣಬಹುದು. ಅದೇ ಬಡಾವಣೆಯಲ್ಲಿ ಮಂಗಳವಾರ ಕೆಲವರು ಕಾನೂನಿನ ಹೆದರಿಕೆ ಇಲ್ಲದೆ, ಒಬ್ಬ ವ್ಯಕ್ತಿಯನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ. ಈ ರೀತಿಯ ಅಪರಾಧಗಳಲ್ಲಿ ತೊಡಗುವವರಿಗೆ ಕಾನೂನಿನ ಭಯ ಇಲ್ಲದಿರುವುದೇ ಕಾರಣ.ಗೃಹ ಸಚಿವರ ಜಿಲ್ಲೆಯಲ್ಲಿಯೇ ಪರಿಸ್ಥಿತಿ ಈಗಾದರೆ, ಬೇರೆ ಜಿಲ್ಲೆಗಳ ಕಥೆ ಏನು ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸರು,ಗೃಹ ಸಚಿವರ ಹೆಸರಿಗೆ ಕೆಟ್ಟ ಹೆಸರು ತರದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಒತ್ತಾಯಿಸಿದ್ದಾರೆ.

ಮಂಗಳವಾರ ಸದಾಶಿವನಗರದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಪ್ರಮುಖ ಕಾರಣ ಹಣದ ವ್ಯವಹಾರ ಎನ್ನಲಾಗುತ್ತಿದೆ. ಮೀಟರ್ ಬಡ್ಡಿ ದಂಧೆ ಹೆಚ್ಚಾಗಿದೆ ಎಂಬುದು ಸಾರ್ವಜನಿಕರ ದೂರಾಗಿದೆ. ಸದಾಶಿವನಗರದ ಗಲ್ಲಿ ಗಲ್ಲಿಗಳಲ್ಲಿ ಅನಾಯಾಸವಾಗಿ ಡ್ರಗ್ಸ್ ದೊರೆಯತ್ತಿದೆ. ಇದಕ್ಕೆ ಯುವಜನರು ಬಲಿಯಾಗುತ್ತಿದ್ದಾರೆ.ವಯಸ್ಸಿಗೆ ಬಂದ ಮಗನನ್ನು ಕಳೆದುಕೊಂಡ ಕುಟುಂಬಗಳು ಆನಾಥವಾಗುತ್ತಿವೆ.ಹಾಗಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

12/03/2026 07:56 am

Cinque Terre

700

Cinque Terre

0

ಸಂಬಂಧಿತ ಸುದ್ದಿ