ಶಿರಶಿ : ಇಕ್ಕಟ್ಟಾದ ರಸ್ತೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ಸಂಚಾರದಿಂದ ಅಪಘಾತಗಳ ಭೀತಿ ಹೆಚ್ಚಾಗಿದೆ. ಈ ಮಾರ್ಗದಲ್ಲಿ ಯಾವುದೇ ಮುಂಜಾಗ್ರತಾ ಸೂಚನಾ ಫಲಕಗಳಿಲ್ಲದೆ ವಾಹನ ಸವಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಆಗಾಗ ಸಂಭವಿಸುವ ಅಪಘಾತಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಜವಾಬ್ದಾರಿ ಗ್ರಾಮಸ್ಥರ ಮೇಲೆಯೇ ಬಿದ್ದಿದೆ. ರಸ್ತೆ ಕಾಮಗಾರಿಯಿಂದಾಗಿ ಮಾರ್ಗವು ಸಂಪೂರ್ಣ ಧೂಳುಮಯವಾಗಿದ್ದು, ಈ ಹಾದಿಯಲ್ಲಿ ಪ್ರಯಾಣಿಸುವುದು ಸವಾರರಿಗೆ ದುಸ್ಸಾಹಸವಾಗಿದೆ.
ಅಪಘಾತಗಳ ಸಂಖ್ಯೆ ಹೆಚ್ಚಾಗುವ ಮುನ್ನವೇ, ತಕ್ಷಣವೇ ರಸ್ತೆಗೆ ಸೂಚನಾ ಫಲಕಗಳನ್ನು ಅಳವಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
Kshetra Samachara
14/03/2026 02:17 pm
LOADING...