ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಹಿಂದೂಪರ ಕಾರ್ಯಕರ್ತರು ಸೇರಿ ಆರು ಜನರ ಗಡಿಪಾರಿಗೆ ಜಿಲ್ಲಾ ಪೊಲೀಸ್ ಇಲಾಖೆ ಶಿಫಾರಸ್ಸು

ಚಿಕ್ಕಮಗಳೂರು: ಹಿಂದೂ ಮತ್ತು ಮುಸ್ಲಿಂ ಮುಖಂಡರು ಸೇರಿದಂತೆ ಒಟ್ಟು ಆರು ಜನರನ್ನು ಗಡಿಪಾರು ಮಾಡಲು ಜಿಲ್ಲಾ ಪೊಲೀಸ್ ಇಲಾಖೆಯು ಉಪವಿಭಾಗಾಧಿಕಾರಿಗಳಿಗೆ (ಎಸಿ) ಶಿಫಾರಸ್ಸು ಮಾಡಿದೆ. ಈ ಪಟ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮತ್ತು ಬಜರಂಗದಳದ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಅವರ ಹೆಸರುಗಳಿದ್ದು, ಇವರೊಂದಿಗೆ ಜೋಹರ್, ಚಾಂದ್, ಇಬ್ರಾಹಿಂ ಹಾಗೂ ಇಮ್ರಾನ್ ಎಂಬುವವರಿಗೂ ನೋಟಿಸ್ ನೀಡಲು ಸೂಚಿಸಲಾಗಿದೆ.

​ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಳೆಯ ಪ್ರಕರಣಗಳನ್ನು ಉಲ್ಲೇಖಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಮುಖವಾಗಿ ಸಂತೋಷ್ ಅವರ ವಿರುದ್ಧ ಇರುವ 14 ಪ್ರಕರಣಗಳ ಹಿನ್ನೆಲೆಯಲ್ಲಿ ಈ ಶಿಫಾರಸ್ಸು ಪತ್ರ ರವಾನೆಯಾಗಿದೆ. ಜಿಲ್ಲಾ ಪೊಲೀಸ್ ಇಲಾಖೆಯ ಈ ಪ್ರಸ್ತಾವನೆಯನ್ನು ಪರಿಶೀಲಿಸಲಿರುವ ಚಿಕ್ಕಮಗಳೂರು ಉಪವಿಭಾಗಾಧಿಕಾರಿಗಳು, ಆರು ಜನರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಿದ ಬಳಿಕ ಅಂತಿಮ ಆದೇಶ ಹೊರಡಿಸಲಿದ್ದಾರೆ. ಆದರೆ ಯುಗಾದಿ ಹಬ್ಬದ ಸನಿಹದಲ್ಲಿಯೇ ಇಂತಹ ಗಡಿಪಾರು ಪ್ರಕ್ರಿಯೆಗೆ ಮುಂದಾಗಿರುವುದು ಹಿಂದೂ ಮುಖಂಡರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Edited By : Nagaraj Tulugeri
PublicNext

PublicNext

18/03/2026 05:49 pm

Cinque Terre

7.22 K

Cinque Terre

0

ಸಂಬಂಧಿತ ಸುದ್ದಿ