ಹಾವೇರಿ: ಇಟ್ಟಿಗೆ ತುಂಬಿದ ಟ್ರ್ಯಾಕ್ಟರ್ನ ಇಂಜಿನ್ ಮತ್ತು ಟ್ರೇಲರ್ ನಡುವೆ ಸಿಲುಕಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಮರೋಳ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಮೃತ ದುರ್ದೈವಿ ಚಾಲಕನನ್ನು ಹಾವೇರಿ ತಾಲೂಕಿನ ಗುತ್ತಲ ತಾಂಡಾ ನಿವಾಸಿ, 26 ವರ್ಷದ ದೇವರಾಜ್ ಲಮಾಣಿ ಎಂದು ಗುರುತಿಸಲಾಗಿದೆ.
ಬೆಳಗ್ಗೆ ಎರಡೂವರೆ ಸಾವಿರ ಇಟ್ಟಿಗೆಗಳನ್ನು ತುಂಬಿಕೊಂಡು ಮರೋಳ ಗ್ರಾಮಕ್ಕೆ ಬಂದಿದ್ದ ವೇಳೆ ಈ ದುರಂತ ಸಂಭವಿಸಿದೆ. ಇಟ್ಟಿಗೆಗಳನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್ನ ಇಂಜಿನ್ ಏಕಾಏಕಿ ಮೇಲೆ ಎದ್ದಿದ್ದು, ನಿಯಂತ್ರಣ ಕಳೆದುಕೊಂಡ ಪರಿಣಾಮ ಚಾಲಕ ಇಂಜಿನ್ ಮತ್ತು ಟ್ರೇಲರ್ ನಡುವೆ ಸಿಲುಕಿ ಮೃತಪಟ್ಟಿದ್ದಾರೆ.
ಈ ಸಂಬಂಧ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
PublicNext
18/03/2026 10:23 pm
LOADING...