ಹಡಗಲಿ : ವಿಜಯನಗರ ಜಿಲ್ಲೆಯಲ್ಲಿ ರಾತ್ರಿ ವೇಳೆ ಸಿಡಿಲು - ಗುಡುಗು ಸಮೇತ ಮಳೆ ಸುರಿದಿದೆ. ಇದರಿಂದ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಕಂದಗಲ್ಲು ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿದ್ದಾನೆ. ಕಂದಗಲ್ಲು ಗ್ರಾಮದ ನಿವಾಸಿ ಪ್ರಶಾಂತ (22) ಸಿಡಿಲಿಗೆ ಬಲಿಯಾದ ಯುವಕ ಅಂತ ಗುರುತಿಸಲಾಗಿದೆ.
ಸಿಡಿಲು - ಗುಡುಗು ಸಮೇತ ಮಳೆ ಬರುತ್ತಿದ್ದ ವೇಳೆ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಯುವಕ ಹೋಗುತ್ತಿದ್ದ. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತನ್ನೊಂದಿಗಿದ್ದ ಇಬ್ಬರು ಸ್ನೇಹಿತರಿಗೆ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿವೆ. ಗಾಯಾಳುಗಳು ವ್ಯಕ್ತಿಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೂವಿನ ಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
19/03/2026 11:31 am
LOADING...