ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಎಣ್ಣೆ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ; ಜೀವನ್ ಸೇರಿ 5 ಆರೋಪಿಗಳ ಬಂಧನ

ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನ ಮೇಲೆ ನಡೆದ ಮಾರಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸ್ನೇಹಿತರ ನಡುವೆ ಪಾರ್ಟಿ ವೇಳೆ ಎಣ್ಣೆ ಮತ್ತಿನಲ್ಲಿ ನಡೆದ ಗಲಾಟೆಯೇ ಈ ದಾಳಿಗೆ ಕಾರಣ ಎಂದು ತಿಳಿದುಬಂದಿದೆ.

ಘಟನೆ ವಿವರ: ಜೊತೆಯಲ್ಲಿ ಪಾರ್ಟಿ ಮಾಡುತ್ತಿದ್ದ ಸ್ನೇಹಿತರ ನಡುವೆ ಕಲಹ ಏರ್ಪಟ್ಟಿತ್ತು. ಈ ಸಂದರ್ಭದಲ್ಲಿ ಜೀವನ್ ಎಂಬಾತ ತನ್ನ ಸ್ನೇಹಿತರನ್ನು ಕರೆಸಿದ್ದು, ಕಾರಿನಲ್ಲಿ ಬಂದ ಗ್ಯಾಂಗ್ ಮುನಿರಾಜ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಸದ್ಯ, ಪಾರ್ಟಿ ವೇಳೆ ಎಣ್ಣೆ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಮಾರಕ ದಾಳಿಗೆ ತಿರುಗಿ, ಈ ಪ್ರಕರಣದಲ್ಲಿ ಜೀವನ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Edited By : Shivu K
PublicNext

PublicNext

19/03/2026 04:39 pm

Cinque Terre

15.49 K

Cinque Terre

0

ಸಂಬಂಧಿತ ಸುದ್ದಿ