ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಅಟ್ಟಹಾಸ: ವಸತಿ ಪ್ರದೇಶಕ್ಕೆ ನುಗ್ಗಿ ನರ್ಸರಿ ನಾಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ಸಾರ್ವಜನಿಕರು ಭೀತಿಯಲ್ಲಿ ದಿನದೂಡುವಂತಾಗಿದೆ. ಈವರೆಗೆ ಕೃಷಿ ಜಮೀನುಗಳಿಗೆ ಮಾತ್ರ ಸೀಮಿತವಾಗಿದ್ದ ಆನೆಗಳ ಹಾವಳಿ ಈಗ ಜನವಸತಿ ಪ್ರದೇಶಗಳಿಗೂ ವ್ಯಾಪಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಗುರುವಾರ ರಾತ್ರಿ ತಾಲೂಕಿನ ಸತ್ತಿಹಳ್ಳಿ ಗ್ರಾಮದ ಕೃಷ್ಣ ಎಂಬುವವರ ಮನೆಯ ಸಮೀಪ ಎರಡು ಆನೆಗಳು ಕಾಣಿಸಿಕೊಂಡು ನರ್ಸರಿಗೆ ನುಗ್ಗಿ ಅಪಾರ ಹಾನಿ ಮಾಡಿವೆ. ಕಾಫಿ ಮತ್ತು ಸಿಲ್ವರ್ ಸಸಿಗಳ ಬುಟ್ಟಿಗಳನ್ನು ತುಳಿದು ನಾಶಪಡಿಸುವುದರ ಜೊತೆಗೆ, ಅಲ್ಲಿದ್ದ ಕೃಷಿ ಉಪಕರಣಗಳನ್ನು ಸಹ ಹಾಳುಗೆಡವಿವೆ.

ಜನವಸತಿ ಪ್ರದೇಶದಲ್ಲೇ ಆನೆಗಳು ಬೀಡು ಬಿಟ್ಟಿರುವುದರಿಂದ ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಪಡುತ್ತಿದ್ದು, ಕೂಡಲೇ ಅರಣ್ಯ ಇಲಾಖೆ ಮಧ್ಯಪ್ರವೇಶಿಸಿ ಆನೆಗಳನ್ನು ಕಾಡಿಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Edited By : Vinayak Patil
Kshetra Samachara

Kshetra Samachara

20/03/2026 12:57 pm

Cinque Terre

1.26 K

Cinque Terre

0

ಸಂಬಂಧಿತ ಸುದ್ದಿ