ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಂಗಭದ್ರಾ ಜಲಾಶಯಕ್ಕೆ ಸಚಿವ ಬೋಸರಾಜು ಭೇಟಿ : ರೈತರಲ್ಲಿ ಹೊಸ ಆಶಾಭಾವ ಮೂಡಿಸಿದ ಕ್ರಸ್ಟ್ ಗೇಟ್ ಕಾಮಗಾರಿ!

ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಇದರ ಭಾಗವಾಗಿ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾಮಗಾರಿಯನ್ನು ಸಣ್ಣ ನೀರಾವರಿ ಸಚಿವ ಬೋಸರಾಜು ವೀಕ್ಷಣೆ ಮಾಡಿ ಪರಿಶೀಲನೆ ನಡೆಸಿದ್ದಾರೆ.

ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ವೇಳೆ ಕ್ರಸ್ಟ್ ಗೇಟ್ ಅಳವಡಿಕೆ ಯಾವ ರೀತಿ ನಡೆಯುತ್ತಿದೆ ಅಂತ ಖುದ್ದು ಜಲಾಶಯಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಸಚಿವ ಬೋಸರಾಜ್‌ಗೆ ತುಂಗಭದ್ರಾ ಜಲಾಶಯದ ಆಡಳಿತ ಮಂಡಳಿಯ ಅಧಿಕಾರಿಗಳು ಸಾಥ್ ನೀಡುವುದರ ಜೊತೆಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

Edited By : Manjunath H D
Kshetra Samachara

Kshetra Samachara

20/03/2026 08:56 pm

Cinque Terre

1,000

Cinque Terre

0

ಸಂಬಂಧಿತ ಸುದ್ದಿ