ವಿಜಯನಗರ: ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧ ಭೀತಿಯಿಂದಾಗಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿ ಆತಂಕ ಬೆನ್ನಲ್ಲೇ ಗೋಡೌನ್ ಗಳ ಮೇಲೆ ಪೊಲೀಸ್ ಇಲಾಖೆ ನಿಗಾ ಇಟ್ಟಿದೆ. ಗ್ಯಾಸ್ ಗೋಡೌನ್ ಗಳ ಕಾವಲಿಗೆ ಪೊಲೀಸರ ನಿಯೋಜನೆ ಮಾಡಲಾಗಿದೆ.
ಅಡುಗೆ ಅನಿಲ ಅಕ್ರಮವಾಗಿ ಮಾರಾಟ ಮಾಡಲಾಗಿದೆ ಅನ್ನೋ ಆರೋಪಗಳು ಕೇಳಿಬಂದ ಕೂಡಲೇ ಎಚ್ಚೆತ್ತಿರೋ ಹೊಸಪೇಟೆ ನಗರದ ಗೋಡೌನ್ ಗಳ ಮೇಲೆ ಕಣ್ಣಿಟ್ಟಿದ್ದಾರೆ. ಸಿಲಿಂಡರ್ ಸಮಸ್ಯೆ ಆಗದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತಿದೆ. ಜಿಲ್ಲಾಡಳಿತ ಕೂಡ ಜಿಲ್ಲೆಯಲ್ಲಿ ಗ್ಯಾಸ್ ಸಮಸ್ಯೆ ಇಲ್ಲ ಅಂತ ಸ್ಪಷ್ಟನೆ ನೀಡಿದೆ.
PublicNext
21/03/2026 12:57 pm
LOADING...