ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಧಿಕಾರಿ ಆತ್ಮಹತ್ಯೆ ಪ್ರಕರಣ : ಪಂಜಾಬ್ ಸಚಿವ ಲಾಲ್ಜಿತ್‌ ಸಿಂಗ್‌ ದಿಢೀರ್ ರಾಜೀನಾಮೆ!

ಚಂಡೀಗಢ: ಪಂಜಾಬ್ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಒಬ್ಬ ಅಧಿಕಾರಿಯ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ, ನಿಷ್ಪಕ್ಷಪಾತ ತನಿಖೆಗೆ ಅನುಕೂಲವಾಗುವಂತೆ ಈ ನಿರ್ಧಾರ ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಭಗವಂತ್ ಮಾನ್ ಅವರು, ಅಮೃತಸರದಲ್ಲಿ ಗೋದಾಮು ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿದ್ದ ಗಗನ್‌ದೀಪ್‌ ಸಿಂಗ್‌ ರಾಂಧವ ಅವರ ಆತ್ಮಹತ್ಯೆ ಪ್ರಕರಣದ ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸಾರಿಗೆ ಸಚಿವ ಭುಲ್ಲರ್ ಅವರನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಮ್ಯಾನೇಜರ್‌ ರಾಂಧವ ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ಮಾಡಿದ್ದ ವಿಡಿಯೋವೊಂದರಲ್ಲಿ ಸಚಿವ ಭುಲ್ಲರ್‌ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರಾಂಧವ ಅವರು 'ಸೆಲ್ಫೋಸ್' ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪಿಸಿರುವ ಅವರು, 10 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಂತೆ ರಾಂಧವ ಮೇಲೆ ಒತ್ತಡ ಹೇರಲಾಗಿತ್ತು ಎಂದಿದ್ದಾರೆ. ಅಲ್ಲದೆ, ಸಚಿವರ ಸಹಾಯಕರಿಗೆ ಟೆಂಡರ್ ನೀಡುವಂತೆ ಒತ್ತಡ ಹೇರಲಾಗಿದ್ದರೂ, ರಾಂಧವ ಅವರು ಕಾನೂನುಬದ್ಧ ಬಿಡ್‌ದಾರರನ್ನು ಆಯ್ಕೆ ಮಾಡಿದ್ದರಿಂದ, ಅವರನ್ನು ಸಚಿವರ ಸ್ಥಳಕ್ಕೆ ಕರೆಸಿ ಹಲ್ಲೆ ನಡೆಸಿ ವಿಡಿಯೋ ರೆಕಾರ್ಡ್‌ ಮಾಡಲು ಮುಂದಾಗಿದ್ದರು ಎಂದು ಮಜಿಥಿಯಾ ಆರೋಪಿಸಿದ್ದಾರೆ.

ಈ ಆರೋಪಗಳು ಆಧಾರ ರಹಿತ ಎಂದು ಸಚಿವ ಭುಲ್ಲರ್‌ ಸ್ಪಷ್ಟಪಡಿಸಿದ್ದಾರೆ. ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ, "ನಮ್ಮ ಪಕ್ಷವು ಯಾವಾಗಲೂ ಸತ್ಯವನ್ನು ಬೆಂಬಲಿಸುತ್ತದೆ ಮತ್ತು ಸತ್ಯದ ಪರವಾಗಿ ನಿಲ್ಲುತ್ತದೆ. ಆದ್ದರಿಂದ, ನನ್ನ ವಿರುದ್ಧದ ಆ ಆರೋಪಗಳನ್ನು ಸರಿಯಾಗಿ ತನಿಖೆ ಮಾಡಬೇಕೆಂದು ನಾನು ಬಯಸುತ್ತೇನೆ. ಈ ತನಿಖೆ ಪೂರ್ಣಗೊಳ್ಳುವವರೆಗೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನನ್ನ ರಾಜೀನಾಮೆಯನ್ನು ಅನುಮೋದಿಸುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡುತ್ತೇನೆ," ಎಂದು ಬರೆದುಕೊಂಡಿದ್ದಾರೆ.

Edited By :
PublicNext

PublicNext

21/03/2026 03:54 pm

Cinque Terre

10.04 K

Cinque Terre

0

ಸಂಬಂಧಿತ ಸುದ್ದಿ