ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಅಭ್ಯರ್ಥಿ ಯಾರು ಅಂತಾ ಈಗಾಗಲೇ ಬಹಿರಂಗಪಡಿಸಿಯಾಗಿದೆ. ಆದರೆ, ಕಾಂಗ್ರೆಸ್ ಮಾತ್ರ ತನ್ನ ಅಭ್ಯರ್ಥಿಗಳ ಹೆಸರನ್ನು ಬಹಿರಂಗಪಡಿಸುವಲ್ಲಿ ಹಿಂದೇಟು ಹಾಕುತ್ತಿದೆ. ಈ ಬಾರಿ ದಾವಣಗೆರೆಯಲ್ಲಿ ಮುಸ್ಲಿಮರು ನಮಗೇ ಟಿಕೆಟ್ ಬೇಕೆಂದು ಹಠ ಹಿಡಿದಿರೋದೇ ಕಾರಣವಾಗಿದೆ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಮರೆಂದರೆ ತನ್ನ ಗುಲಾಮರೆಂದು ಭಾವಿಸಿದೆ. ಹೀಗಂತ ವಿಧಾನಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು ಹೇಳಿದರು.
ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯನ್ನು ತೋರಿಸಿದರೆ ಸಾಕು ಕಾಂಗ್ರೆಸ್ ನವರು ಬಾಲ ಮುದುರಿಕೊಂಡು ಬಂದು ಕಾಂಗ್ರೆಸ್ ಗೆ ಓಟ್ ಹಾಕುತ್ತಾರೆ ಎಂಬ ಭಾವನೆ ಹೊಂದಿದ್ದಾರೆಂದು ಕಿಡಿ ಹೊತ್ತಿಸಿದರು.
PublicNext
21/03/2026 08:00 pm
LOADING...