ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಲಾರಿಯ ಚಕ್ರಕ್ಕೆ ಸಿಲುಕಿ ದಂಪತಿ ದಾರುಣ ಸಾವು

ಶಿವಮೊಗ್ಗ: ಜೋಳ ತುಂಬಿದ್ದ ‌ಲಾರಿಯ ಚಕ್ರಕ್ಕೆ ಸಿಲುಕಿ ಬೈಕ್ ನಲ್ಲಿ ಬರುತ್ತಿದ್ದ ದಂಪತಿ ದಾರೂಣವಾಗಿ ಸಾವನ್ನಪ್ಪಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಕೆ.ಜಂಕ್ಷನ್ ಬಳಿ ಭಾನುವಾರ ರಾತ್ರಿ ನಡೆದಿದೆ.

ಮೃತರನ್ನು ತರೀಕೆರೆ ತಾಲ್ಲೂಕಿನ ಬರಗೇನಹಳ್ಳಿ ಗೌಳಿಕ್ಯಾಂಪ್‌ನ ಬಾಬು (30) ಎಂದು ಗುರುತಿಸಲಾಗಿದೆ. ಪತ್ನಿ ಹೆಸರು ತಿಳಿದುಬಂದಿಲ್ಲ.

ಜೋಳ ತುಂಬಿದ್ದ ಲಾರಿಯು ಶಿವಮೊಗ್ಗ ತರೀಕೆರೆ ಮಾರ್ಗವಾಗಿ ಹೊರಟಿದ್ದು, ದಂಪತಿ ಸಹ ಹೋಟೆಲ್ ಕೆಲಸ ಮುಗಿಸಿಕೊಂಡು ಬರುವಾಗ ಲಾರಿ ಹಿಂಬದಿಯ ಚಕ್ರಕ್ಕೆ ಸಿಲುಕಿದ್ದಾರೆ. ಬಾಬು ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಓವರ್ ಟೇಕ್ ಭರದಲ್ಲಿ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.

Edited By : Vijay Kumar
PublicNext

PublicNext

30/03/2026 10:24 am

Cinque Terre

12.26 K

Cinque Terre

0

ಸಂಬಂಧಿತ ಸುದ್ದಿ